የቅዱስ ቁርዓን ይዘት ትርጉም - የካናድኛ ትርጉም - በሐምዛ ቡቱር

የገፅ ቁጥር:close

external-link copy
51 : 28

وَلَقَدْ وَصَّلْنَا لَهُمُ الْقَوْلَ لَعَلَّهُمْ یَتَذَكَّرُوْنَ ۟ؕ

ನಾವು ಜನರಿಗೆ ನಿರಂತರವಾಗಿ ನಮ್ಮ ವಚನಗಳನ್ನು ತಲುಪಿಸುತ್ತಿದ್ದೇವೆ. ಅವರು ಉಪದೇಶ ಸ್ವೀಕರಿಸಲೆಂದು. info
التفاسير:

external-link copy
52 : 28

اَلَّذِیْنَ اٰتَیْنٰهُمُ الْكِتٰبَ مِنْ قَبْلِهٖ هُمْ بِهٖ یُؤْمِنُوْنَ ۟

ಇದಕ್ಕೆ ಮೊದಲು ನಾವು ಯಾರಿಗೆ ಗ್ರಂಥವನ್ನು ನೀಡಿದ್ದೇವೋ ಅವರು ಇದರಲ್ಲೂ ವಿಶ್ವಾಸವಿಡುತ್ತಾರೆ. info
التفاسير:

external-link copy
53 : 28

وَاِذَا یُتْلٰی عَلَیْهِمْ قَالُوْۤا اٰمَنَّا بِهٖۤ اِنَّهُ الْحَقُّ مِنْ رَّبِّنَاۤ اِنَّا كُنَّا مِنْ قَبْلِهٖ مُسْلِمِیْنَ ۟

ಅವರಿಗೆ ಇದನ್ನು ಓದಿಕೊಡಲಾದಾಗ ಅವರು ಹೇಳುತ್ತಾರೆ: “ನಾವು ಇದರಲ್ಲಿ ವಿಶ್ವಾಸವಿಟ್ಟಿದ್ದೇವೆ. ನಿಶ್ಚಯವಾಗಿಯೂ ಇದು ನಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವಾಗಿದೆ. ನಿಶ್ಚಯವಾಗಿಯೂ ನಾವು ಇದಕ್ಕಿಂತ ಮೊದಲೇ ಮುಸಲ್ಮಾನರಾಗಿದ್ದೆವು.” info
التفاسير:

external-link copy
54 : 28

اُولٰٓىِٕكَ یُؤْتَوْنَ اَجْرَهُمْ مَّرَّتَیْنِ بِمَا صَبَرُوْا وَیَدْرَءُوْنَ بِالْحَسَنَةِ السَّیِّئَةَ وَمِمَّا رَزَقْنٰهُمْ یُنْفِقُوْنَ ۟

ಅವರು ತಾಳ್ಮೆಯಿಂದ ಜೀವಿಸಿದ ಕಾರಣ ಅವರಿಗೆ ಇಮ್ಮಡಿ ಪ್ರತಿಫಲವನ್ನು ನೀಡಲಾಗುವುದು. ಅವರು ಒಳಿತಿನ ಮೂಲಕ ಕೆಡುಕನ್ನು ದೂರೀಕರಿಸುತ್ತಾರೆ ಮತ್ತು ನಾವು ಅವರಿಗೆ ನೀಡಿದ ಧನದಿಂದ ಖರ್ಚು ಮಾಡುತ್ತಾರೆ. info
التفاسير:

external-link copy
55 : 28

وَاِذَا سَمِعُوا اللَّغْوَ اَعْرَضُوْا عَنْهُ وَقَالُوْا لَنَاۤ اَعْمَالُنَا وَلَكُمْ اَعْمَالُكُمْ ؗ— سَلٰمٌ عَلَیْكُمْ ؗ— لَا نَبْتَغِی الْجٰهِلِیْنَ ۟

ಅವರು ಅನಗತ್ಯ ಮಾತುಗಳನ್ನು ಕೇಳಿದರೆ (ಅದಕ್ಕೆ ಕಿವಿಗೊಡದೆ) ವಿಮುಖರಾಗುತ್ತಾರೆ. ಅವರು ಹೇಳುತ್ತಾರೆ: “ನಮಗೆ ನಮ್ಮ ಕರ್ಮಗಳು ಮತ್ತು ನಿಮಗೆ ನಿಮ್ಮ ಕರ್ಮಗಳು. ನಿಮಗೆ ಸಲಾಂ. ನಮಗೆ ಅವಿವೇಕಿಗಳ ಅಗತ್ಯವಿಲ್ಲ.” info
التفاسير:

external-link copy
56 : 28

اِنَّكَ لَا تَهْدِیْ مَنْ اَحْبَبْتَ وَلٰكِنَّ اللّٰهَ یَهْدِیْ مَنْ یَّشَآءُ ۚ— وَهُوَ اَعْلَمُ بِالْمُهْتَدِیْنَ ۟

ನಿಮಗೆ ಇಷ್ಟವಿರುವವರನ್ನು ಸನ್ಮಾರ್ಗಕ್ಕೆ ಸೇರಿಸಲು ನಿಮ್ಮಿಂದ ಸಾಧ್ಯವಿಲ್ಲ.[1] ಆದರೆ ಅಲ್ಲಾಹು ಅವನು ಇಚ್ಛಿಸುವವರನ್ನು ಸನ್ಮಾರ್ಗಕ್ಕೆ ಸೇರಿಸುತ್ತಾನೆ. ಸನ್ಮಾರ್ಗದಲ್ಲಿರುವವರ ಬಗ್ಗೆ ಅವನು ಬಹಳ ಚೆನ್ನಾಗಿ ತಿಳಿದಿದ್ದಾನೆ. info

[1] ಪ್ರವಾದಿ ಮುಹಮ್ಮದರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಚಿಕ್ಕಪ್ಪ ಅಬೂತಾಲಿಬ್ ಮುಸ್ಲಿಂ ಆಗಿರಲಿಲ್ಲ. ಅವರು ಇಸ್ಲಾಂ ಸ್ವೀಕರಿಸಬೇಕೆಂದು ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅತೀವ ಆಸೆಯಿತ್ತು. ಅದಕ್ಕಾಗಿ ಅವರು ಬಹಳ ಪ್ರಯತ್ನ ಪಟ್ಟಿದ್ದರು. ಚಿಕ್ಕಪ್ಪ ಮರಣಶಯ್ಯೆಯಲ್ಲಿ ಮಲಗಿರುವಾಗಲೂ ಸಹ ಅವರು ಹತ್ತಿರ ಕುಳಿತು ನಾನಾ ರೀತಿಯಲ್ಲಿ ತಿಳಿಹೇಳುತ್ತಿದ್ದರು. ಆದರೆ ಅಬೂತಾಲಿಬ್ ಇಸ್ಲಾಂ ಸ್ವೀಕರಿಸದೆ ಸತ್ಯನಿಷೇಧಿಯಾಗಿಯೇ ನಿಧನರಾದರು. ಇದರಿಂದ ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಹಳ ದುಃಖವಾಯಿತು. ಆಗ ಈ ವಚನವು ಅವತೀರ್ಣವಾಯಿತು.

التفاسير:

external-link copy
57 : 28

وَقَالُوْۤا اِنْ نَّتَّبِعِ الْهُدٰی مَعَكَ نُتَخَطَّفْ مِنْ اَرْضِنَا ؕ— اَوَلَمْ نُمَكِّنْ لَّهُمْ حَرَمًا اٰمِنًا یُّجْبٰۤی اِلَیْهِ ثَمَرٰتُ كُلِّ شَیْءٍ رِّزْقًا مِّنْ لَّدُنَّا وَلٰكِنَّ اَكْثَرَهُمْ لَا یَعْلَمُوْنَ ۟

ಅವರು ಹೇಳುತ್ತಾರೆ: “ನಾವೇನಾದರೂ ನಿಮ್ಮ ಜೊತೆಗೆ ಸೇರಿ ಸನ್ಮಾರ್ಗವನ್ನು ಹಿಂಬಾಲಿಸಿದರೆ ನಮ್ಮನ್ನು ನೆಲದಿಂದ ಕಿತ್ತೆಸೆಯಲಾಗಬಹುದು.” ನಾವು ಅವರಿಗೆ ನಿರ್ಭಯವಾದ ಒಂದು ಪವಿತ್ರ ಸ್ಥಳದಲ್ಲಿ (ಹರಂನಲ್ಲಿ) ಬದುಕುವ ಅವಕಾಶ ಮಾಡಿಕೊಡಲಿಲ್ಲವೇ? ಅಲ್ಲಿಗೆ ಎಲ್ಲಾ ವಸ್ತುಗಳ ಫಲಗಳನ್ನು ನಮ್ಮ ಕಡೆಯ ಉಪಜೀವನವಾಗಿ ತರಲಾಗುತ್ತದೆ. ಆದರೆ ಅವರಲ್ಲಿ ಹೆಚ್ಚಿನವರು ಇದನ್ನು ಅರ್ಥಮಾಡಿಕೊಳ್ಳುವುದಿಲ್ಲ. info
التفاسير:

external-link copy
58 : 28

وَكَمْ اَهْلَكْنَا مِنْ قَرْیَةٍ بَطِرَتْ مَعِیْشَتَهَا ۚ— فَتِلْكَ مَسٰكِنُهُمْ لَمْ تُسْكَنْ مِّنْ بَعْدِهِمْ اِلَّا قَلِیْلًا ؕ— وَكُنَّا نَحْنُ الْوٰرِثِیْنَ ۟

ಆಡಂಬರದ ಜೀವನ ನಡೆಸುತ್ತಿದ್ದ ಎಷ್ಟೋ ಊರುಗಳನ್ನು ನಾವು ನಾಶಮಾಡಿದ್ದೇವೆ. ಅಗೋ ಅವರ ವಾಸಸ್ಥಳಗಳು! ಅವರ ಬಳಿಕ ಬಹಳ ಅಪೂರ್ವವಾಗಿಯೇ ಅಲ್ಲಿ ಜನವಾಸವುಂಟಾಗಿತ್ತು. ನಾವೇ ಅವುಗಳ ವಾರಸುದಾರರಾಗಿದ್ದೇವೆ. info
التفاسير:

external-link copy
59 : 28

وَمَا كَانَ رَبُّكَ مُهْلِكَ الْقُرٰی حَتّٰی یَبْعَثَ فِیْۤ اُمِّهَا رَسُوْلًا یَّتْلُوْا عَلَیْهِمْ اٰیٰتِنَا ۚ— وَمَا كُنَّا مُهْلِكِی الْقُرٰۤی اِلَّا وَاَهْلُهَا ظٰلِمُوْنَ ۟

ನಿಮ್ಮ ಪರಿಪಾಲಕನು (ಅಲ್ಲಾಹು) ಊರುಗಳನ್ನು ನಾಶ ಮಾಡುವುದಿಲ್ಲ. ಎಲ್ಲಿಯವರೆಗೆಂದರೆ, ನಮ್ಮ ವಚನಗಳನ್ನು ಜನರಿಗೆ ಓದಿಕೊಡುವ ಒಬ್ಬ ಸಂದೇಶವಾಹಕರನ್ನು ಅವುಗಳಲ್ಲಿ ಪ್ರಮುಖವಾದ ಊರಿಗೆ ಕಳುಹಿಸುವ ತನಕ. ಊರುಗಳ ನಿವಾಸಿಗಳು ಅಕ್ರಮಗಳಲ್ಲಿ ಮುಳುಗಿರುವಾಗ ಮಾತ್ರ ನಾವು ಆ ಊರುಗಳನ್ನು ನಾಶ ಮಾಡುತ್ತೇವೆ. info
التفاسير: