ಓ ನನ್ನ ಜನಾಂಗದವರೇ ನಾನು ಇದಕ್ಕಾಗಿ ನಿಮ್ಮಿಂದ ಧನವನ್ನೇನೂ ಬೇಡುತ್ತಿಲ್ಲ, ನನ್ನ ಪ್ರತಿಫಲವಂತೂ ಕೇವಲ ಅಲ್ಲಾಹನ ಬಳಿಯಲ್ಲಿದೆ ಮತ್ತು ನಾನು ಸತ್ಯ ವಿಶ್ವಾಸಿಗಳನ್ನು ನನ್ನ ಬಳಿಯಿಂದ ದೂರಕ್ಕಟ್ಟುವುದೂ ಇಲ್ಲ. ಅವರಿಗೆ ತಮ್ಮ ಪ್ರಭುವನ್ನು ಭೇಟಿಯಾಗಲಿಕ್ಕಿದೆ, ಆದರೆ ನಾನು ನಿಮ್ಮನ್ನು ಅವಿವೇಕ ತೋರುತ್ತಿರುವುದಾಗಿ ಕಾಣುತ್ತಿದ್ದೇನೆ.
ನಾನು ನನ್ನ ಬಳಿ ಅಲ್ಲಾಹನ ಭಂಡಾರಗಳಿವೆಯೆAದು, ನಾನು ಅಗೋಚರ ಜ್ಞಾನವನ್ನು ಹೊಂದಿದ್ದೇನೆAದು ಹೇಳುತ್ತಿಲ್ಲ. ನಾನೊಬ್ಬ ದೇವಚರನೆಂದೂ ಹೇಳುತ್ತಿಲ್ಲ, ಮತ್ತು ನಿಮ್ಮ ದೃಷ್ಟಿಗೆ ಕೀಳಾಗಿ ಕಾಣುತ್ತಿರುವವರಿಗೆ ಅಲ್ಲಾಹನು ಯಾವುದೇ ಒಳಿತನ್ನು ನೀಡಲಾರೆನೆಂದೂ ನಾನು ಹೇಳುತ್ತಿಲ್ಲ. ಅವರ ಮನಸ್ಸಿನಲ್ಲಿರುವುದನ್ನು ಅಲ್ಲಾಹನೇ ಚೆನ್ನಾಗಿ ಬಲ್ಲನು ನಾನೇನಾದರೂ ಅಂತಹ ಮಾತನ್ನು ಹೇಳಿದರೆ ಖಂಡಿತವಾಗಿಯೂ ನಾನು ಅಕ್ರಮಿಗಳಲ್ಲಾಗುವೆನು.
ಅವರ ಜನಾಂಗದವರು ಹೇಳಿದರು : " ಓ ನೂಹ್ ನೀನು ನಮ್ಮೊಂದಿಗೆ ವಾಗ್ವಾದವನ್ನು ಮಾಡಿರುವೆ ಮತ್ತು ತುಂಬಾ ವಾಗ್ವಾದ ಮಾಡಿರುವೆ. ಇನ್ನು ನಮಗೆ ಹೆದರಿಸುತ್ತಿರುವ ಯಾತನೆಯನ್ನು ನಮ್ಮಲ್ಲಿಗೆ ತಾ, ನೀನು ಸತ್ಯವಂತರಲ್ಲಾಗಿದ್ದರೆ,
ಅಲ್ಲಾಹನು ನಿಮ್ಮ ಸತ್ಯ ನಿಷೇಧದಿಂದಾಗಿ ದಾರಿ ತಪ್ಪಿಸಲಿಚ್ಛಿಸಿರುವಾಗ ನಾನು ನಿಮ್ಮ ಹಿತಚಿಂತನೆ ಮಾಡಿದರು ನಿಮಗೆ ನನ್ನ ಹಿತೋಪದೇಶವು ಒಂದಿಷ್ಟೂ ಫಲ ನೀಡದು, ಅವನೇ ನಿಮ್ಮ ಪ್ರಭು ಆಗಿದ್ದಾನೆ ಮತ್ತು ಅವನೆಡೆಗೆ ಮರಳಿಸಲಾಗುವಿರಿ.
ಇದನ್ನು ಸ್ವಯಂ ಮುಹಮ್ಮದ್ರವರೇ ರಚಿಸಿದ್ದಾರೆಂದು ಅವರು ಆರೋಪಿಸುತ್ತಿದ್ದಾರೆಯೇ ? ಹೇಳಿರಿ ನಾನದನ್ನು ರಚಿಸಿದ್ದಾದರೆ ನನ್ನ ಅಪರಾಧವು ನನ್ನ ಮೇಲಿರುತ್ತದೆ, ಮತ್ತು ನೀವು ಎಸಗುತ್ತಿರುವ ಅಪರಾಧಗಳ ವಿಚಾರದಲ್ಲಿ ನಾನು ಹೊಣೆ ಮುಕ್ತನಾಗಿದ್ದೇನೆ.
ಮತ್ತು ನೂಹ್ರೆಡೆಗೆ ದಿವ್ಯವಾಣಿ ಮಾಡಲಾಯಿತು; ನಿಮ್ಮ ಜನಾಂಗದಿAದ ಈಗಾಗಲೇ ವಿಶ್ವಾಸ ಸ್ವೀಕರಿಸಿದವರ ಹೊರತು ಇನ್ನಾರೂ ಎಂದಿಗೂ ವಿಶ್ವಾಸವಿರಿಸುವುದಿಲ್ಲ. ಆದ್ದರಿಂದ ನೀವು ಅವರ ಕರ್ಮಗಳ ಕುರಿತು ದುಃಖಿಸಬೇಡಿ.
ಮತ್ತು ನಮ್ಮ ಕಣ್ಣೆದುರು ನಮ್ಮ ಮಾರ್ಗದರ್ಶನದ ಪ್ರಕಾರ ನೀವು ಹಡಗೊಂದನ್ನು ನಿರ್ಮಿಸಿರಿ. ಅಕ್ರಮವೆಸಗಿದವರ ಪರವಾಗಿ ನನ್ನೊಂದಿಗೆ ಮಾತನಾಡಬೇಡಿರಿ ಖಂಡಿತವಾಗಿಯೂ ಅವರು ಮುಳುಗಿಸಲ್ಪಡುವರು.