ಯಾರು ಸನ್ಮಾರ್ಗ ಸ್ವೀಕರಿಸುತ್ತಾನೋ ಅವನು ಸ್ವತಃ ತನ್ನ ಒಳಿತಿಗೆಂದೇ ಸನ್ಮಾರ್ಗ ಸ್ವೀಕರಿಸುತ್ತಾನೆ ಹಾಗೂ ಯಾರು ಪಥ ಭ್ರಷ್ಟನಾಗುತ್ತನೋ ಪಥ ಭ್ರಷ್ಟತೆಯ ಭಾರವು ಅವನ ಮೇಲೆಯೇ ಇರುವುದು ಮತ್ತು ಭಾರ ಹೊತ್ತ ಯಾವೊಬ್ಬನೂ ಬೇರೊಬ್ಬ ವ್ಯಕ್ತಿಯ ಭಾರವನ್ನು ಹೊರುವುದಿಲ್ಲ ಮತ್ತು ಒಬ್ಬ ಸಂದೇಶವಾಹಕನನ್ನು ಕಳುಹಿಸುವ ಮೊದಲೇ (ಯಾವುದೇ ಜನಾಂಗವನ್ನು) ನಾವು ಶಿಕ್ಷಿಸುವುದಿಲ್ಲ.