ಅವರ ಅವಸ್ಥೆಯು ಫಿರ್ಔನನ ಅನುಯಾಯಿಗಳ ಮತ್ತು ಅವರ ಮುಂಚಿನವರ ಅವಸ್ಥೆಯಂತಾಗಿದೆ. ಅವರು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದರು. ಅನಂತರ ಅಲ್ಲಾಹನು ಅವರ ಪಾಪಗಳ ನಿಮಿತ್ತ ಅವರನ್ನು ಹಿಡಿದುಬಿಟ್ಟನು ಮತ್ತು ಅಲ್ಲಾಹನು ಕಠಿಣವಾಗಿ ಶಿಕ್ಷಿಸುವನಾಗಿದ್ದಾನೆ.
ನಿಶ್ಚಯವಾಗಿಯು (ಬದರ್ ಯುದ್ಧದಲ್ಲಿ) ಪರಸ್ಪರ ಎದುರುಗೊಂಡ ಎರಡು ಬಣಗಳಲ್ಲಿ ನಿಮಗೆ ದೃಷ್ಟಾಂತವಿದೆ. ಒಂದು ಬಣವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಿತ್ತು ಮತ್ತು ಇನ್ನೊಂದು ಬಣವು ಸತ್ಯನಿಷೇಧಿಗಳದ್ದಾಗಿತ್ತು. ಅವರು ತಮ್ಮ ಭಾಹ್ಯ ದೃಷ್ಟಿಯಲ್ಲಿ ಅವರನ್ನು (ಮುಸ್ಲಿಮರನ್ನು) ತಮಗಿಂತ ಇಮ್ಮಡಿ ಇರುವುದಾಗಿ ಕಂಡಿದ್ದರು. ಅಲ್ಲಾಹನು ತಾನಿಚ್ಛಿಸುವವರಿಗೆ ತನ್ನ ಸಹಾಯದಿಂದ ಬೆಂಬಲವನ್ನು ನೀಡುತ್ತಾನೆ. ಖಂಡಿತವಾಗಿಯು ಅಂತಃರ್ದೃಷ್ಟಿಯುಳ್ಳವರಿಗೆ ಇದರಲ್ಲಿ ಪಾಠವಿದೆ.
ಜನÀÀರಿಗೆ ಇಂದ್ರಿಯಾಸಕ್ತಿಗಳಾದ ಸ್ತಿçÃಯರು, ಪುತ್ರರು, ರಾಶಿ ಹಾಕಲಾದ ಚಿನ್ನ ಮತ್ತು ಬೆಳ್ಳಿಗಳ ನಿಧಿಗಳು ಉತ್ಕೃಷ್ಟ ಜಾತಿಯ ಕುದುರೆಗಳು, ಜಾನುವಾರುಗಳು ಮತ್ತು ಕೃಷಿ ಭೂಮಿ ಮುಂತಾದ ಮನಮೋಹಕ ವಸ್ತುಗಳ ಪ್ರೀತಿಯನ್ನು ಅಲಂಕೃತಗೊಳಿಸಲಾಗಿದೆ. ಇವೆಲ್ಲವೂ ಐಹಿಕ ಜೀವನದ ಸುಖಭೋಗ ಸವಲತ್ತುಗಳಷ್ಟೆ ಮತ್ತು ಮರಳಿ ತಲುಪಲಿರುವ ಉತ್ತಮ ಸ್ಥಳವು ಅಲ್ಲಾಹನ ಬಳಿಯೇ ಇದೆ.
ಓ ಪೈಗಂಬರರೇ ಹೇಳಿರಿ; ನಾನು ನಿಮಗೆ ಅದಕ್ಕಿಂತಲೂ ಉತ್ತಮವಾಗಿರುವುದನ್ನು ತಿಳಿಸಿಕೊಡಲೇ? ಭಯಭಕ್ತಿ ಪಾಲಿಸಿದವರಿಗೆ ತಮ್ಮ ಪ್ರಭುವಿನ ಬಳಿ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿವೆ. ಅದರಲ್ಲಿ ಅವರು ಶಾಶ್ವತವಾಗಿರುವರು ಮತ್ತು ಪರಿಶುದ್ಧರಾದ ಪತ್ನಿಯರು ಮತ್ತು ಅದಕ್ಕಿಂತ ಮಹತ್ತರವಾದುದು ಅಲ್ಲಾಹನ ಸಂಪ್ರೀತಿಯಿರುವುದು ಅಲ್ಲಾಹನು ತನ್ನ ದಾಸರನ್ನು ವೀಕ್ಷಿಸುತ್ತಿದ್ದಾನೆ.