ಓ ಪೈಗಂಬರರೇ ಹೇಳಿರಿ: 'ಓ ಗ್ರಂಥದವರೇ, ನಮ್ಮ ಮತ್ತು ನಿಮ್ಮ ನಡುವೆ ಸಮಾನವಾಗಿರುವ ಒಂದು ವಚನದೆಡೆಗೆ ಬನ್ನಿರಿ. ಅಂದರೆ ನಾವು ಅಲ್ಲಾಹನ ಹೊರತು ಇನ್ನಾರನ್ನೂ ಆರಾಧಿಸದಿರೋಣ, ಅವನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡದಿರೋಣ ಮತ್ತು ಅಲ್ಲಾಹನನ್ನು ಹೊರತುಪಡಿಸಿ ನಾವು ಪರಸ್ಪರರಲ್ಲಿ ಇತರ ಯಾರನ್ನೂ ನಮ್ಮ ಪ್ರಭುವಾಗಿರಿಸದಿರೋಣ. ಇನ್ನು ಅವರು ವಿಮುಖರಾದರೆ ಅವರೊಡನೆ ಹೇಳಿರಿ: 'ನಾವು (ಅಲ್ಲಾಹನಿಗೆ) ವಿಧೇಯರಾಗಿದ್ದೇವೆಂಬುದಕ್ಕೆ ನೀವು ಸಾಕ್ಷö್ಯವಹಿಸಿರಿ'
ಓ ಗ್ರಂಥದವರೇ, ನೀವು ಇಬ್ರಾಹೀಮರ ವಿಷಯದಲ್ಲಿ ಏಕೆ ತರ್ಕಿಸುತ್ತೀರಿ? ವಸ್ತುತಃ ತೌರಾತ್ ಮತ್ತು ಇಂಜೀಲ್ಗಳAತು ಅವರ ನಂತರ ಅವತೀರ್ಣಗೊಂಡಿವೆ. ಹಾಗಿದ್ದು ನೀವು ತಿಳಿದುಕೊಳ್ಳುವುದಿಲ್ಲವೇ?
ನಿಮಗೆ ಜ್ಞಾನವಿರುವ ವಿಷಯದಲ್ಲಿ ನೀವು ತರ್ಕಿಸದಿರಿ. ಇನ್ನು ನಿಮಗೆ ಯಾವುದೇ ಜ್ಞಾನವಿಲ್ಲದ ವಿಷಯದಲ್ಲಿ ನೀವೇಕೆ ತರ್ಕಿಸುತ್ತಿರುವಿರಿ? ಅಲ್ಲಾಹನು ಅರಿಯುತ್ತಾನೆ ಮತ್ತು ನೀವು ಅರಿಯುವುದಿಲ್ಲ.
ಇಬ್ರಾಹೀಮರು ಯಹೂದಿಯರೋ, ಕ್ರೆöÊಸ್ತರೋ ಆಗಿರಲಿಲ್ಲ. ಆದರೆ ಅವರು ಮಿಥ್ಯವನ್ನು ತ್ಯಜಿಸಿ ಸತ್ಯವನ್ನು ಅನುಸರಿಸುವ ಶರಣರಾಗಿದ್ದರು ಮತ್ತು ಅವರು ಬಹುದೇವಾರಾಧಕರಲ್ಲಿ ಸೇರಿದವರಾಗಿರಲಿಲ್ಲ.
ಖಂಡಿತವಾಗಿಯು ಜನರ ಪೈಕಿ ಇಬ್ರಾಹೀಮನೊಂದಿಗೆ ಹೆಚ್ಚು ಸಮೀಪಸ್ಥರು ಅವರನ್ನು ಅನುಸರಿಸಿದವರು ಮತ್ತು ಈ ಪೈಗಂಬರ್ (ಮುಹಮ್ಮದ್(ಸ)) ಮತ್ತು ಸತ್ಯವಿಶ್ವಾಸಿಗಳಾಗಿದ್ದಾರೆ (ಮುಸ್ಲಿಮರು) ಅಲ್ಲಾಹನು ಸತ್ಯವಿಶ್ವಾಸಿಗಳ ಮಿತ್ರನಾಗಿದ್ದಾನೆ.
ಗ್ರಂಥದವರ ಪೈಕಿ ಒಂದು ಪಂಗಡದವರು ನಿಮ್ಮನ್ನು ಪಥಭ್ರಷ್ಟಗೊಳಿಸಲು ಬಯಸುತ್ತಾರೆ. ವಾಸ್ತವದಲ್ಲಿ ಅವರು ಸ್ವತಃ ತಮ್ಮನ್ನೇ ಪಥಭ್ರಷ್ಟಗೊಳಿಸುತ್ತಿದ್ದಾರೆ. ಮತ್ತು ಅವರು ಅದನ್ನು ಗ್ರಹಿಸುವುದಿಲ್ಲ.