ನಮ್ಮ ಪ್ರಭೂ, ಓರ್ವ ಕರೆ ನೀಡುವಾತನು: 'ನೀವು ನಿಮ್ಮ ಪ್ರಭುವಿನಲ್ಲಿ ವಿಶ್ವಾಸವಿಡಿರಿ' ಎಂದು ಹೇಳುತ್ತಾ ಸತ್ಯವಿಶ್ವಾಸದೆಡೆಗೆ ಕರೆಯುವುದನ್ನು ನಾವು ಆಲಿಸಿದೆವು. ಆಗ ನಾವು ವಿಶ್ವಾಸವಿಟ್ಟೆವು. ಆದುದರಿಂದ ನಮ್ಮ ಪ್ರಭು, ನಮ್ಮ ಪಾಪಗಳನ್ನು ಕ್ಷಮಿಸಿಬಿಡು ಮತ್ತು ನಮ್ಮ ಕೆಡುಕುಗಳನ್ನು ನಮ್ಮಿಂದ ದೂರ ಮಾಡು ಮತ್ತು ಸಜ್ಜನರ ಜೊತೆ ನಮಗೆ ಮರಣವನ್ನು ಕೊಡು.