ಭೂಮ್ಯಾಕಾಶಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದವನು ಅವನೇ. ಅವನ ಸಿಂಹಾಸನವು ನೀರಿನ ಮೇಲಿತ್ತು. ನಿಮ್ಮಲ್ಲಿ ಯಾರು ಅತ್ಯುತ್ತಮವಾಗಿ ಕರ್ಮವೆಸಗುತ್ತಾರೆಂದು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ. ನಿಶ್ಚಯವಾಗಿಯೂ ಮರಣಾನಂತರ ನಿಮ್ಮನ್ನು ಜೀವ ನೀಡಿ ಎಬ್ಬಿಸಲಾಗುವುದು ಎಂದು ನೀವು ಹೇಳಿದರೆ ಆ ಸತ್ಯನಿಷೇಧಿಗಳು ಹೇಳುತ್ತಾರೆ: “ಇದು ಸ್ಪಷ್ಟ ಮಾಟಗಾರಿಕೆಯಲ್ಲದೆ ಇನ್ನೇನೂ ಅಲ್ಲ.”