[1] ಇಲ್ಲಿ ದೇವದೂತರು ಎಂದರೆ ಜಿಬ್ರೀಲ್ (ಅವರ ಮೇಲೆ ಶಾಂತಿಯಿರಲಿ). ಜಿಬ್ರೀಲರ ಕುದುರೆ ಹಾದುಹೋಗುವುದು ಕಂಡಾಗ ಸಾಮಿರಿ ಅದರ ಕಾಲುಗಳ ಅಡಿಯಿಂದ ಮಣ್ಣನ್ನು ತೆಗೆದು ಜೋಪಾನವಾಗಿಟ್ಟಿದ್ದನು. ಆ ಮಣ್ಣನ್ನು ಅವನು ಆಭರಣಗಳಿಂದ ನಿರ್ಮಿಸಿದ ಕರುವಿನ ಮೂರ್ತಿಗೆ ಹಾಕಿದಾಗ ಅದರಿಂದ ಒಂದು ಶಬ್ದ ಹೊರಬರಲು ಶುರುವಾಯಿತು.