ಅವರು ಕರಾರು ಉಲ್ಲಂಘಿಸಿದ ಕಾರಣ ನಾವು ಅವರನ್ನು ಶಪಿಸಿದೆವು ಮತ್ತು ಅವರ ಹೃದಯಗಳನ್ನು ಕಠೋರಗೊಳಿಸಿದೆವು. ಅವರು ವಚನಗಳನ್ನು ಅದರ ಸ್ಥಾನದಿಂದ ವಿರೂಪಗೊಳಿಸುತ್ತಾರೆ.[1] ಅವರಿಗೆ ಉಪದೇಶ ಮಾಡಲಾದ ಒಂದಂಶವನ್ನು ಅವರು ಮರೆತೇ ಬಿಟ್ಟರು. ಅವರು ಮಾಡುವ ವಂಚನೆಯನ್ನು ನೀವು ಗಮನಿಸುತ್ತಲೇ ಇರುವಿರಿ—ಅವರಲ್ಲಿ ಕೆಲವರ ಹೊರತು. ಆದ್ದರಿಂದ ಅವರನ್ನು ಕ್ಷಮಿಸಿರಿ ಮತ್ತು (ಅವರ ತಪ್ಪನ್ನು) ಕಡೆಗಣಿಸಿರಿ. ನಿಶ್ಚಯವಾಗಿಯೂ ಒಳಿತು ಮಾಡುವವರನ್ನು ಅಲ್ಲಾಹು ಇಷ್ಟಪಡುತ್ತಾನೆ.
[1] ಅಂದರೆ ಅವರು ಗ್ರಂಥದ ವಚನಗಳನ್ನು ಅಸಾಂದರ್ಭಿಕವಾಗಿ ಉಲ್ಲೇಖಿಸುತ್ತಾರೆ ಮತ್ತು ತಪ್ಪು ಅರ್ಥಗಳನ್ನು ನೀಡುತ್ತಾರೆ; ಅಥವಾ ವಚನಗಳನ್ನೇ ತಿದ್ದಿ ಬದಲಾಯಿಸುತ್ತಾರೆ.