ಯಾರಿಗೆ (ಸ್ವತಂತ್ರಗೊಳಿಸಲು ಗುಲಾಮ) ಸಿಗಲಿಲ್ಲವೋ ಅವನು—ಅವರು ಪರಸ್ಪರ ಕೂಡುವುದಕ್ಕೆ ಮುನ್ನ—ಎರಡು ತಿಂಗಳು ನಿರಂತರ ಉಪವಾಸ ಆಚರಿಸಬೇಕು. ಯಾರಿಗೆ ಇದು ಕೂಡ ಸಾಧ್ಯವಿಲ್ಲವೋ ಅವನು ಅರುವತ್ತು ಬಡವರಿಗೆ ಆಹಾರ ನೀಡಬೇಕು. ಇದು ನೀವು ಅಲ್ಲಾಹು ಮತ್ತು ಅವನ ಸಂದೇಶವಾಹಕರ ಆಜ್ಞೆಯನ್ನು ಪಾಲಿಸಬೇಕೆಂಬ ಕಾರಣದಿಂದಾಗಿದೆ. ಇವು ಅಲ್ಲಾಹು ನಿಶ್ಚಯಿಸಿದ ಎಲ್ಲೆಗಳಾಗಿವೆ. ಸತ್ಯನಿಷೇಧಿಗಳಿಗೆ ಯಾತನಾಮಯ ಶಿಕ್ಷೆಯಿದೆ.