ಅಲ್ಲಾಹನ ಭೇಟಿಯನ್ನು ನಿಷೇಧಿಸಿದವರು ನಿಶ್ಚಯವಾಗಿಯೂ ನಷ್ಟ ಹೊಂದಿದರು. ಎಲ್ಲಿಯವರೆಗೆಂದರೆ, ಹಠಾತ್ತನೆ ಅಂತಿಮದಿನವು ಬರುವಾಗ, ಅವರು ಹೇಳುವರು: “ನಾವು ಇದರ (ಅಂತಿಮದಿನ) ಬಗ್ಗೆ ನಿರ್ಲಕ್ಷ್ಯ ಮಾಡಿದ ಕಾರಣ ಅಯ್ಯೋ! ನಮ್ಮ ದುರ್ಗತಿಯೇ!” ಅವರು ಅವರ ಬೆನ್ನುಗಳ ಮೇಲೆ ಪಾಪಗಳ ಭಾರವನ್ನು ಹೊರುತ್ತಿರುವರು. ಅವರು ಹೊರುವ ಭಾರವು ಬಹಳ ನಿಕೃಷ್ಟವಾಗಿದೆ.