ಹೇಳಿರಿ: “ನೀವು ಆಲೋಚಿಸಿ ನೋಡಿದ್ದೀರಾ! ಅಲ್ಲಾಹು ನಿಮ್ಮ ಶ್ರವಣಶಕ್ತಿ ಮತ್ತು ದೃಷ್ಟಿಯನ್ನು ತೆಗೆದು, ನಿಮ್ಮ ಹೃದಯಗಳಿಗೆ ಮೊಹರು ಹಾಕಿದರೆ, ಅಲ್ಲಾಹನ ಹೊರತು ಅದನ್ನು ತಂದುಕೊಡುವ ದೇವರು ಯಾರು?” ನಾವು ಅವರಿಗೆ ನಮ್ಮ ವಚನಗಳನ್ನು ಹೇಗೆ ವಿವರಿಸಿಕೊಡುತ್ತಿದ್ದೇವೆಂದು ನೋಡಿರಿ. ಅದರ ನಂತರವೂ ಅವರು ವಿಮುಖರಾಗುತ್ತಿದ್ದಾರೆ.