ಸಮುದ್ರ ತೀರದಲ್ಲಿದ್ದ ಆ ಊರಿನ ಬಗ್ಗೆ ಅವರೊಡನೆ ಕೇಳಿರಿ. ಅವರು ಸಬ್ಬತ್ ದಿನ (ಶನಿವಾರ) ಅತಿರೇಕವೆಸಗಿದ ಸಂದರ್ಭ. ಸಬ್ಬತ್ನ ದಿನ (ಶನಿವಾರ) ಮೀನುಗಳು ನೀರಿನ ಮೇಲೆ ತಲೆಯೆತ್ತುತ್ತಾ ಅವರ ಮುಂದೆ ಪ್ರತ್ಯಕ್ಷವಾಗುತ್ತಿದ್ದವು ಮತ್ತು ಸಬ್ಬತ್ ಅಲ್ಲದ ದಿನ ಅವರ ಮುಂದೆ ಪ್ರತ್ಯಕ್ಷವಾಗುತ್ತಿರಲಿಲ್ಲ. ಅವರು ಅವಿಧೇಯತೆ ತೋರುತ್ತಿದ್ದ ಕಾರಣ ನಾವು ಅವರನ್ನು ಈ ರೀತಿಯಲ್ಲಿ ಪರೀಕ್ಷಿಸಿದೆವು.[1]
[1] ಯಹೂದಿಗಳಿಗೆ ಸಬ್ಬತ್ ದಿನ (ಶನಿವಾರ) ಮೀನು ಹಿಡಿಯುವುದು ನಿಷೇಧಿಸಲಾಗಿತ್ತು. ಆದರೆ ಅಲ್ಲಾಹನ ಪರೀಕ್ಷೆಯಂತೆ ಶನಿವಾರವೇ ನೀರಿನಲ್ಲಿ ಹೆಚ್ಚು ಮೀನುಗಳು ಕಂಡುಬರುತ್ತಿದ್ದವು. ಆದ್ದರಿಂದ ಯಹೂದಿಗಳು ಒಂದು ಉಪಾಯ ಮಾಡಿದರು. ಅವರು ಶನಿವಾರ ಮೀನು ಹಿಡಿಯುವ ಬದಲು ಮೀನಿಗಾಗಿ ಬಲೆ ಹಾಕುತ್ತಿದ್ದರು. ನಂತರ ಅದರಲ್ಲಿ ಸಿಕ್ಕಿದ ಮೀನುಗಳನ್ನು ಭಾನುವಾರ ಹಿಡಿಯುತ್ತಿದ್ದರು. ಇದು ದೇವಾಜ್ಞೆಯ ಸ್ಪಷ್ಟ ಉಲ್ಲಂಘನೆಯಾಗಿತ್ತು.