[1] ಯಹೂದಿಗಳಲ್ಲಿದ್ದ ನೀತಿವಂತರಲ್ಲಿ ಕೆಲವರು ದುಷ್ಟರಿಗೆ ಬುದ್ಧಿವಾದ ಹೇಳಿದಾಗ, ಇತರರು ಹೇಳಿದರು: “ಅವರಿಗೆ ಬುದ್ಧಿವಾದ ಹೇಳಲು ಹೋಗಬೇಡಿ. ಅವರು ಹೇಗೂ ಅಲ್ಲಾಹನ ಶಿಕ್ಷೆಗೆ ಪಾತ್ರರಾಗುವವರು. ಅವರಿಗೆ ಉಪದೇಶ ಮಾಡುವುದು ವ್ಯರ್ಥ.” ಆದರೆ ಇದು ಸರಿಯಾದ ನಿಲುವಲ್ಲ. ಒಳಿತನ್ನು ಆದೇಶಿಸುವುದು ಮತ್ತು ಕೆಡುಕನ್ನು ವಿರೋಧಿಸುವುದು ಸತ್ಯವಿಶ್ವಾಸಿಯ ಗುಣವಾಗಿದೆ.