ನಾವು ಇಚ್ಛಿಸುತ್ತಿದ್ದರೆ ಆ ಜ್ಞಾನದ ಮೂಲಕ ನಾವು ಅವನನ್ನು ಉನ್ನತಿಗೇರಿಸುತ್ತಿದ್ದೆವು. ಆದರೆ ಅವನು ಭೂಮಿಗೆ ಅಂಟಿಕೊಂಡು ಸ್ವೇಚ್ಛೆಗಳನ್ನು ಹಿಂಬಾಲಿಸಿದನು. ಅವನ ಉದಾಹರಣೆಯು ಒಂದು ನಾಯಿಯಂತೆ. ನೀವು ಅದನ್ನು ಓಡಿಸಿದರೂ ಅದು ನಾಲಗೆ ಹೊರಚಾಚುತ್ತದೆ. ನೀವು ಅದನ್ನು ಅದರ ಪಾಡಿಗೆ ಬಿಟ್ಟರೂ ಅದು ನಾಲಗೆ ಹೊರಚಾಚುತ್ತದೆ. ಇದು ನಮ್ಮ ವಚನಗಳನ್ನು ನಿಷೇಧಿಸಿದವರ ಉದಾಹರಣೆಯಾಗಿದೆ. ಅವರಿಗೆ ಈ ಕಥೆಗಳನ್ನು ಹೇಳಿಕೊಡಿ. ಅವರು ಆಲೋಚಿಸುವುದಕ್ಕಾಗಿ.