ಹೇಳಿರಿ: “ನಾನು ನನಗಾಗಿ ಯಾವುದೇ ಲಾಭ ಅಥವಾ ತೊಂದರೆ ಮಾಡುವ ಅಧಿಕಾರವನ್ನು ಹೊಂದಿಲ್ಲ—ಅಲ್ಲಾಹು ಏನು ಇಚ್ಛಿಸುತ್ತಾನೋ ಅದರ ಹೊರತು. ನನಗೆ ಅದೃಶ್ಯ ಜ್ಞಾನವಿರುತ್ತಿದ್ದರೆ, ನಾನು ಹೇರಳ ಒಳಿತುಗಳನ್ನು ಮಾಡುತ್ತಿದ್ದೆ. ಕೆಡುಕು ನನ್ನನ್ನು ಸ್ಪರ್ಶಿಸುತ್ತಲೇ ಇರಲಿಲ್ಲ. ವಿಶ್ವಾಸವಿಡುವ ಜನರಿಗೆ ನಾನೊಬ್ಬ ಮುನ್ನೆಚ್ಚರಿಕೆಗಾರ ಮತ್ತು ಸುವಾರ್ತೆ ನೀಡುವವ ಮಾತ್ರವಾಗಿದ್ದೇನೆ.”