ಹೇಳಿರಿ: “ಅಲ್ಲಾಹು ತನ್ನ ದಾಸರಿಗೆ ಹೊರತಂದ ಅಲಂಕಾರದ ಉಡುಪುಗಳನ್ನು ಮತ್ತು ಉತ್ತಮ ಆಹಾರಗಳನ್ನು ನಿಷೇಧಿಸಿದ್ದು ಯಾರು?” ಹೇಳಿರಿ: “ಇಹಲೋಕದಲ್ಲಿ ಅವು ಸತ್ಯವಿಶ್ವಾಸಿಗಳಿಗೆ (ಮತ್ತು ಇತರರಿಗೆ) ಇರುವುದಾಗಿದೆ. ಪುನರುತ್ಥಾನ ದಿನದಲ್ಲಿ ವಿಶೇಷವಾಗಿ ಸತ್ಯವಿಶ್ವಾಸಿಗಳಿಗೆ ಮಾತ್ರ ಇರುವುದಾಗಿದೆ.” ಈ ರೀತಿಯಲ್ಲಿ ನಾವು ತಿಳಿದುಕೊಳ್ಳುವ ಜನರಿಗಾಗಿ ವಚನಗಳನ್ನು ವಿವರಿಸಿಕೊಡುತ್ತೇವೆ.