ಅಲ್ಲಾಹನ ಮೇಲೆ ಸುಳ್ಳು ಆರೋಪಿಸುವವನಿಗಿಂತ ಅಥವಾ ಅವನ ವಚನಗಳನ್ನು ನಿಷೇಧಿಸುವವನಿಗಿಂತ ದೊಡ್ಡ ಅಕ್ರಮಿ ಯಾರು? ಅವರು (ಅಲ್ಲಾಹನ) ದಾಖಲೆಯಲ್ಲಿ ಅವರಿಗೆ ನಿಶ್ಚಯಿಸಲಾದ ಪಾಲನ್ನು ಪಡೆಯುವರು. ಎಲ್ಲಿಯವರೆಗೆಂದರೆ, ಅವರ ಪ್ರಾಣ ತೆಗೆಯಲು ನಮ್ಮ ದೂತರು (ದೇವದೂತರು) ಅವರ ಬಳಿಗೆ ಬರುವಾಗ, ಅವರು (ದೇವದೂತರು) ಕೇಳುವರು: “ನೀವು ಅಲ್ಲಾಹನನ್ನು ಬಿಟ್ಟು ಕರೆದು ಪ್ರಾರ್ಥಿಸುತ್ತಿದ್ದವರು ಎಲ್ಲಿದ್ದಾರೆ?” ಅವರು ಉತ್ತರಿಸುವರು: “ಅವರು ನಮ್ಮನ್ನು ಬಿಟ್ಟು ಹೋದರು.” ಅವರು ಸತ್ಯನಿಷೇಧಿಗಳಾಗಿದ್ದರೆಂದು ಅವರೇ ಅವರ ವಿರುದ್ಧ ಸಾಕ್ಷಿ ನುಡಿದಿದ್ದಾರೆ.