ನಂತರ ನಾವು ಕೆಡುಕಿನ ಸ್ಥಾನದಲ್ಲಿ (ಬಡತನ ಮತ್ತು ಅನಾರೋಗ್ಯದ ಸ್ಥಾನದಲ್ಲಿ) ಒಳಿತನ್ನು ನೀಡಿ ಬದಲಾಯಿಸುವೆವು. ಎಲ್ಲಿಯವರೆಗೆಂದರೆ, ಅವರು ಅಭಿವೃದ್ಧಿ ಪಡೆದು, “ನಮ್ಮ ಪೂರ್ವಜರಿಗೂ ಬಡತನ ಮತ್ತು ಅನಾರೋಗ್ಯ ಉಂಟಾಗಿತ್ತು” ಎಂದು ಹೇಳುವ ತನಕ. ಆಗ ನಾವು ಅವರಿಗೆ ತಿಳಿಯದ ರೀತಿಯಲ್ಲಿ ಹಠಾತ್ತನೆ ಅವರನ್ನು ಹಿಡಿದುಕೊಳ್ಳುವೆವು.