ಧರ್ಮವನ್ನು ಅಲ್ಲಾಹನಿಗೆ ನಿಷ್ಕಳಂಕವಾಗಿಸಿ ಏಕನಿಷ್ಠರಾಗಿ ಅವನನ್ನು ಮಾತ್ರ ಆರಾಧಿಸಿರಿ, ನಮಾಝ್ ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ ಎಂದಲ್ಲದೆ ಬೇರೇನನ್ನೂ ಅವರಿಗೆ ಆದೇಶಿಸಲಾಗಿರಲಿಲ್ಲ. ಅದೇ ನೇರವಾದ ಧರ್ಮ.
ನಿಶ್ಚಯವಾಗಿಯೂ ಗ್ರಂಥದವರಲ್ಲಿ ಸೇರಿದ ಸತ್ಯನಿಷೇಧಿಗಳು ಮತ್ತು ಬಹುದೇವವಿಶ್ವಾಸಿಗಳು ನರಕವಾಸಿಗಳಾಗಿದ್ದಾರೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅವರು ಸೃಷ್ಟಿಗಳಲ್ಲೇ ಅತಿನಿಕೃಷ್ಟರು.
ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿಯಿರುವ ಪ್ರತಿಫಲವು ಶಾಶ್ವತವಾಸದ ಸ್ವರ್ಗೋದ್ಯಾನಗಳಾಗಿವೆ. ಅವುಗಳ ತಳಭಾಗದಿಂದ ನದಿಗಳು ಹರಿಯುತ್ತವೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಾಹು ಅವರ ಬಗ್ಗೆ ಸಂಪ್ರೀನಾಗಿದ್ದಾನೆ ಮತ್ತು ಅವರು ಅಲ್ಲಾಹನ ಬಗ್ಗೆ ಸಂಪ್ರೀತರಾಗಿದ್ದಾರೆ. ಇದು ತನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುವವನಿಗೆ ಇರುವುದಾಗಿದೆ.