[1] ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅನುಯಾಯಿಗಳಲ್ಲಿ ಗುಲಾಮರು, ಬಡವರು ಮತ್ತು ದಬ್ಬಾಳಿಕೆಗೆ ಒಳಗಾದವರು ಇದ್ದರು. ಇವರು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಯಲ್ಲಿದ್ದುದರಿಂದ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬರಲು ಕುರೈಷ್ ಮುಖಂಡರಿಗೆ ಅಸಹ್ಯವಾಗುತ್ತಿತ್ತು. ಅವರನ್ನು ದೂರ ಮಾಡಿದರೆ ನಾವು ನಿಮ್ಮ ಬಳಿಗೆ ಬರುತ್ತೇವೆಂದು ಅವರು ಹೇಳುತ್ತಿದ್ದರು.