Übersetzung der Bedeutungen von dem heiligen Quran - Die Kannada-Übersetzung - Hamza Batur.

Nummer der Seite:close

external-link copy
15 : 34

لَقَدْ كَانَ لِسَبَاٍ فِیْ مَسْكَنِهِمْ اٰیَةٌ ۚ— جَنَّتٰنِ عَنْ یَّمِیْنٍ وَّشِمَالٍ ؕ۬— كُلُوْا مِنْ رِّزْقِ رَبِّكُمْ وَاشْكُرُوْا لَهٗ ؕ— بَلْدَةٌ طَیِّبَةٌ وَّرَبٌّ غَفُوْرٌ ۟

ನಿಶ್ಚಯವಾಗಿಯೂ ಸಬಾ ದೇಶದವರಿಗೆ[1] ಅವರ ವಾಸ್ತವ್ಯದಲ್ಲೇ ಒಂದು ದೃಷ್ಟಾಂತವಿತ್ತು. ಬಲಭಾಗದಲ್ಲಿ ಮತ್ತು ಎಡಭಾಗದಲ್ಲಿರುವ ಎರಡು ತೋಟಗಳು. “ನಿಮ್ಮ ಪರಿಪಾಲಕನು (ಅಲ್ಲಾಹು) ದಯಪಾಲಿಸಿದ ಆಹಾರವನ್ನು ತಿನ್ನಿರಿ ಮತ್ತು ಅವನಿಗೆ ಕೃತಜ್ಞರಾಗಿರಿ. ಉತ್ತಮ ದೇಶ ಮತ್ತು ಕ್ಷಮಿಸುವ ಪರಿಪಾಲಕ!” info

[1] ಪ್ರಾಚೀನ ಸಬಾ ಸಾಮ್ರಾಜ್ಯ ಎಂದರೆ ಇಂದಿನ ಯಮನ್ ದೇಶ.

التفاسير:

external-link copy
16 : 34

فَاَعْرَضُوْا فَاَرْسَلْنَا عَلَیْهِمْ سَیْلَ الْعَرِمِ وَبَدَّلْنٰهُمْ بِجَنَّتَیْهِمْ جَنَّتَیْنِ ذَوَاتَیْ اُكُلٍ خَمْطٍ وَّاَثْلٍ وَّشَیْءٍ مِّنْ سِدْرٍ قَلِیْلٍ ۟

ಆದರೆ ಅವರು ನಿರ್ಲಕ್ಷಿಸಿದರು. ಆಗ ನಾವು ಅವರ ಕಡೆಗೆ ಪ್ರಬಲ ಪ್ರವಾಹವನ್ನು ಕಳುಹಿಸಿದೆವು. (ಆ ಪ್ರವಾಹದ ಮೂಲಕ) ಅವರ ಆ ಎರಡು (ಹಸಿರು) ತೋಟಗಳಿಗೆ ಬದಲಿಯಾಗಿ ಕಹಿ ಹಣ್ಣುಗಳು, ಪಕ್ಕೆ ಮರಗಳು ಮತ್ತು ಕೆಲವು ಬೋರೆ ಮರಗಳನ್ನು ಹೊಂದಿದ ಎರಡು ತೋಟಗಳನ್ನು ನೀಡಿದೆವು.[1] info

[1] ಅವರು ಬೆಟ್ಟದಿಂದ ಹರಿದು ಬರುವ ನೀರನ್ನು ತಡೆಗಟ್ಟಿ ಕೃಷಿಗೆ ಉಪಯೋಗಿಸಲು ಅಣೆಕಟ್ಟು ನಿರ್ಮಿಸಿದ್ದರು. ಬೆಟ್ಟದಿಂದ ಉಕ್ಕಿ ಬಂದ ಪ್ರವಾಹದಿಂದ ಈ ಅಣೆಕಟ್ಟು ಒಡೆದು ಅವರ ಹೊಲ ಬೆಳೆಗಳೆಲ್ಲವೂ ನಾಶವಾದವು. ನಂತರ ಅಲ್ಲಿ ಕಹಿ ಹಣ್ಣುಗಳು, ಪಕ್ಕೆ ಮರಗಳು ಮತ್ತು ಬೋರೆ ಮರಗಳ ಹೊರತು ಬೇರೇನೂ ಬೆಳೆಯಲಿಲ್ಲ.

التفاسير:

external-link copy
17 : 34

ذٰلِكَ جَزَیْنٰهُمْ بِمَا كَفَرُوْا ؕ— وَهَلْ نُجٰزِیْۤ اِلَّا الْكَفُوْرَ ۟

ಇದು ಅವರ ಕೃತಘ್ನತೆಗೆ ನಾವು ನೀಡಿದ ಪ್ರತಿಫಲವಾಗಿದೆ. ಮಹಾ ಕೃತಘ್ನರಿಗೆ ಮಾತ್ರ ನಾವು ಇಂತಹ ಶಿಕ್ಷೆಗಳನ್ನು ನೀಡುತ್ತೇವೆ. info
التفاسير:

external-link copy
18 : 34

وَجَعَلْنَا بَیْنَهُمْ وَبَیْنَ الْقُرَی الَّتِیْ بٰرَكْنَا فِیْهَا قُرًی ظَاهِرَةً وَّقَدَّرْنَا فِیْهَا السَّیْرَ ؕ— سِیْرُوْا فِیْهَا لَیَالِیَ وَاَیَّامًا اٰمِنِیْنَ ۟

ನಾವು ಅವರ ಮತ್ತು ನಾವು ಸಮೃದ್ದಿ ನೀಡಿದ ಊರುಗಳ (ಪ್ಯಾಲಸ್ತೀನ್-ಸಿರಿಯಾ) ನಡುವೆ ಅನೇಕ ಊರುಗಳನ್ನು ಸ್ಥಾಪಿಸಿದೆವು.[1] ಅಲ್ಲಿ ನಾವು (ನಿಶ್ಚಿತ ಅಂತರದಲ್ಲಿ) ಕೆಲವು ತಂಗುದಾಣಗಳನ್ನು ನಿರ್ಣಯಿಸಿದೆವು. (ನಾವು ಹೇಳಿದೆವು): “ಹಗಲು-ರಾತ್ರಿ ಅವುಗಳ ಮೂಲಕ ನಿರ್ಭಯವಾಗಿ ಪ್ರಯಾಣ ಮಾಡಿರಿ.” info

[1] ಇದು ಸಿರಿಯಾ ಮತ್ತು ಯಮನ್‌ನ ನಡುವಿನಲ್ಲಿದ್ದ ಹೆದ್ದಾರಿಯ ಬಗ್ಗೆಯಾಗಿದೆ. ಈ ಹೆದ್ದಾರಿಯಲ್ಲಿ 4,700 ಊರುಗಳಿದ್ದವು ಎಂದು ಹೇಳಲಾಗುತ್ತದೆ. ಇಷ್ಟೊಂದು ದೊಡ್ಡ ಸಂಖ್ಯೆಯ ಊರುಗಳಿದ್ದುದರಿಂದ ಈ ದಾರಿಯಲ್ಲಿ ಪ್ರಯಾಣ ಮಾಡುವವರಿಗೆ ಆಹಾರ-ಪಾನೀಯ ಮತ್ತು ವಸತಿಗಾಗಿ ಪರದಾಡಬೇಕಾಗಿ ಬರುತ್ತಿರಲಿಲ್ಲ. ಹಾಗೆಯೇ ಕಳ್ಳರು ದರೋಡೆಕೋರರ ಭಯವೂ ಇರಲಿಲ್ಲ.

التفاسير:

external-link copy
19 : 34

فَقَالُوْا رَبَّنَا بٰعِدْ بَیْنَ اَسْفَارِنَا وَظَلَمُوْۤا اَنْفُسَهُمْ فَجَعَلْنٰهُمْ اَحَادِیْثَ وَمَزَّقْنٰهُمْ كُلَّ مُمَزَّقٍ ؕ— اِنَّ فِیْ ذٰلِكَ لَاٰیٰتٍ لِّكُلِّ صَبَّارٍ شَكُوْرٍ ۟

ಆದರೆ ಅವರು ಹೇಳಿದರು: “ಓ ನಮ್ಮ ಪರಿಪಾಲಕನೇ! ನಮ್ಮ ಪ್ರಯಾಣದ ದೂರವನ್ನು ಹೆಚ್ಚಿಸು.”[1] ಅವರು ಸ್ವತಃ ಅವರೊಂದಿಗೇ ಅಕ್ರಮವೆಸಗಿದರು. ನಂತರ ನಾವು ಅವರನ್ನು ದಂತಕಥೆಗಳನ್ನಾಗಿ ಮಾಡಿದೆವು ಮತ್ತು ಅವರನ್ನು ಸಂಪೂರ್ಣವಾಗಿ ಚಿಂದಿ ಮಾಡಿದೆವು. ತಾಳ್ಮೆ ಮತ್ತು ಕೃತಜ್ಞತಾಭಾವವುಳ್ಳ ಪ್ರತಿಯೊಬ್ಬರಿಗೂ ಅದರಲ್ಲಿ ದೃಷ್ಟಾಂತಗಳಿವೆ. info

[1] ಯಮನ್ ನಿವಾಸಿಗಳಿಗೆ ಈ ಹೆದ್ದಾರಿ ಪ್ರಯಾಣವು ಸುರಕ್ಷಿತ ಮತ್ತು ಅನುಕೂಲಕರವಾಗಿದ್ದರೂ ಸಹ ಅವರು ಅದನ್ನು ಅಸಹ್ಯಪಟ್ಟರು. ಈ ಹೆದ್ದಾರಿ ಕೂಡ ಜಗತ್ತಿನ ಇತರ ಹೆದ್ದಾರಿಗಳಂತೆ ದುರ್ಗಮ ಮತ್ತು ಕಷ್ಟಕರವಾಗಿಬೇಕೆಂದು ಅವರು ಬಯಸಿದರು.

التفاسير:

external-link copy
20 : 34

وَلَقَدْ صَدَّقَ عَلَیْهِمْ اِبْلِیْسُ ظَنَّهٗ فَاتَّبَعُوْهُ اِلَّا فَرِیْقًا مِّنَ الْمُؤْمِنِیْنَ ۟

ಇಬ್ಲೀಸನು ಅವರ ಮೇಲಿದ್ದ ತನ್ನ ಗುಮಾನಿಯನ್ನು ನಿಜಗೊಳಿಸಿದನು. ಸತ್ಯವಿಶ್ವಾಸಿಗಳ ಒಂದು ಗುಂಪನ್ನು ಹೊರತುಪಡಿಸಿ ಎಲ್ಲರೂ ಅವನನ್ನು ಹಿಂಬಾಲಿಸಿದರು. info
التفاسير:

external-link copy
21 : 34

وَمَا كَانَ لَهٗ عَلَیْهِمْ مِّنْ سُلْطٰنٍ اِلَّا لِنَعْلَمَ مَنْ یُّؤْمِنُ بِالْاٰخِرَةِ مِمَّنْ هُوَ مِنْهَا فِیْ شَكٍّ ؕ— وَرَبُّكَ عَلٰی كُلِّ شَیْءٍ حَفِیْظٌ ۟۠

ಅವನಿಗೆ ಅವರ ಮೇಲೆ ಯಾವುದೇ ಅಧಿಕಾರವಿರಲಿಲ್ಲ. ಇದು ನಾವು ಪರಲೋಕದಲ್ಲಿ ವಿಶ್ವಾಸವಿಡುವವರನ್ನು ಮತ್ತು ಅದರ ಬಗ್ಗೆ ಸಂಶಯವಿರುವವರನ್ನು ಬೇರ್ಪಡಿಸಿ ತಿಳಿಯುವುದಕ್ಕಾಗಿತ್ತು. ನಿಮ್ಮ ಪರಿಪಾಲಕನು (ಅಲ್ಲಾಹು) ಎಲ್ಲಾ ವಿಷಯಗಳನ್ನೂ ಗಮನಿಸುವವನಾಗಿದ್ದಾನೆ. info
التفاسير:

external-link copy
22 : 34

قُلِ ادْعُوا الَّذِیْنَ زَعَمْتُمْ مِّنْ دُوْنِ اللّٰهِ ۚ— لَا یَمْلِكُوْنَ مِثْقَالَ ذَرَّةٍ فِی السَّمٰوٰتِ وَلَا فِی الْاَرْضِ وَمَا لَهُمْ فِیْهِمَا مِنْ شِرْكٍ وَّمَا لَهٗ مِنْهُمْ مِّنْ ظَهِیْرٍ ۟

ಹೇಳಿರಿ: “ಅಲ್ಲಾಹನನ್ನು ಬಿಟ್ಟು ನೀವು (ನಿಮ್ಮ ದೇವರುಗಳೆಂದು) ವಾದಿಸುತ್ತಿರುವ ಎಲ್ಲರನ್ನೂ ಕರೆದು ಪ್ರಾರ್ಥಿಸಿರಿ. ಆಕಾಶಗಳಲ್ಲಿ ಅಥವಾ ಭೂಮಿಯಲ್ಲಿರುವ ಒಂದು ಅಣುವಿನ ತೂಕದಷ್ಟಿರುವ ವಸ್ತು ಕೂಡ ಅವರ ಅಧಿಕಾರದಲ್ಲಿಲ್ಲ. ಭೂಮ್ಯಾಕಾಶಗಳಲ್ಲಿ ಅವರಿಗೆ ಯಾವುದೇ ಪಾಲುದಾರಿಕೆಯಿಲ್ಲ. ಅವರು ಅವನ ಸಹಾಯಕರು ಕೂಡ ಅಲ್ಲ.” info
التفاسير: