[1] ಇವರು ಸತ್ಯವಿಶ್ವಾಸಿಗಳು. ಆದರೆ ಇವರು ತಬೂಕ್ ಯುದ್ಧಕ್ಕೆ ಹೋಗಿರಲಿಲ್ಲ. ಆದರೆ ನಂತರ ಇವರಿಗೆ ತಮ್ಮ ತಪ್ಪಿನ ಅರಿವಾಗಿ ಪಶ್ಚಾತ್ತಾಪಪಟ್ಟರು.
[1] ತಬೂಕ್ ಯುದ್ಧಕ್ಕೆ ಹೋಗದೆ ಹಿಂದೆ ಉಳಿದವರಲ್ಲಿ ಒಂದು ಗುಂಪು ಕಪಟವಿಶ್ವಾಸಿಗಳದ್ದು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮತ್ತು ಸತ್ಯವಿಶ್ವಾಸಿಗಳು ಯುದ್ಧದಿಂದ ಹಿಂದಿರುಗಿ ಬಂದಾಗ ಇವರು ಸುಳ್ಳು ನೆಪಗಳನ್ನು ಹೇಳಿ ತಪ್ಪಿಸಿಕೊಂಡರು. ಆದರೆ ಯುದ್ಧಕ್ಕೆ ಹೋಗದ ಸತ್ಯವಿಶ್ವಾಸಿಗಳು ಸುಳ್ಳು ನೆಪಗಳನ್ನು ಹೇಳಲಿಲ್ಲ. ಬದಲಿಗೆ, ನಿಜವನ್ನೇ ಹೇಳಿದರು. ಆದ್ದರಿಂದ ಅವರ ತೀರ್ಪನ್ನು ಅಲ್ಲಾಹನ ಆಜ್ಞೆ ಬರುವ ತನಕ ಕಾದಿರಿಸಲಾಯಿತು.