કુરઆન મજીદના શબ્દોનું ભાષાંતર - કન્નડ ભાષામાં અનુવાદ - હમઝહ બતુર

પેજ નંબર:close

external-link copy
75 : 4

وَمَا لَكُمْ لَا تُقَاتِلُوْنَ فِیْ سَبِیْلِ اللّٰهِ وَالْمُسْتَضْعَفِیْنَ مِنَ الرِّجَالِ وَالنِّسَآءِ وَالْوِلْدَانِ الَّذِیْنَ یَقُوْلُوْنَ رَبَّنَاۤ اَخْرِجْنَا مِنْ هٰذِهِ الْقَرْیَةِ الظَّالِمِ اَهْلُهَا ۚ— وَاجْعَلْ لَّنَا مِنْ لَّدُنْكَ وَلِیًّا ۙۚ— وَّاجْعَلْ لَّنَا مِنْ لَّدُنْكَ نَصِیْرًا ۟ؕ

ನಿಮಗೇನಾಗಿದೆ? ದಬ್ಬಾಳಿಕೆಯಿಂದ ನರಳುತ್ತಿರುವ ಪುರುಷರು, ಮಹಿಳೆಯರು ಮತ್ತು ಮಕ್ಕಳಿಗಾಗಿ ನೀವೇಕೆ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುವುದಿಲ್ಲ? “ಓ ನಮ್ಮ ಪರಿಪಾಲಕನೇ! ದಬ್ಬಾಳಿಕೆ ನಡೆಸುವ ಜನರು ವಾಸಿಸುತ್ತಿರುವ ಈ ಊರಿನಿಂದ ನಮ್ಮನ್ನು ವಿಮೋಚನೆಗೊಳಿಸು; ನಮಗೆ ನಿನ್ನ ಕಡೆಯ ಒಬ್ಬ ರಕ್ಷಕನನ್ನು ಮತ್ತು ನಿನ್ನ ಕಡೆಯ ಒಬ್ಬ ಸಹಾಯಕನನ್ನು ನಿಯೋಗಿಸು” ಎಂದು ಅವರು ಪ್ರಾರ್ಥಿಸುತ್ತಿದ್ದಾರೆ. info
التفاسير:

external-link copy
76 : 4

اَلَّذِیْنَ اٰمَنُوْا یُقَاتِلُوْنَ فِیْ سَبِیْلِ اللّٰهِ ۚ— وَالَّذِیْنَ كَفَرُوْا یُقَاتِلُوْنَ فِیْ سَبِیْلِ الطَّاغُوْتِ فَقَاتِلُوْۤا اَوْلِیَآءَ الشَّیْطٰنِ ۚ— اِنَّ كَیْدَ الشَّیْطٰنِ كَانَ ضَعِیْفًا ۟۠

ಸತ್ಯವಿಶ್ವಾಸಿಗಳು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಾರೆ. ಸತ್ಯನಿಷೇಧಿಗಳು ಮಿಥ್ಯ ದೇವರುಗಳ ಮಾರ್ಗದಲ್ಲಿ ಯುದ್ಧ ಮಾಡುತ್ತಾರೆ. ಆದ್ದರಿಂದ ಶೈತಾನನ ಮಿತ್ರರ ವಿರುದ್ಧ ಯುದ್ಧ ಮಾಡಿರಿ. ನಿಶ್ಚಯವಾಗಿಯೂ ಶೈತಾನನ ತಂತ್ರವು ಬಲಹೀನವಾಗಿದೆ. info
التفاسير:

external-link copy
77 : 4

اَلَمْ تَرَ اِلَی الَّذِیْنَ قِیْلَ لَهُمْ كُفُّوْۤا اَیْدِیَكُمْ وَاَقِیْمُوا الصَّلٰوةَ وَاٰتُوا الزَّكٰوةَ ۚ— فَلَمَّا كُتِبَ عَلَیْهِمُ الْقِتَالُ اِذَا فَرِیْقٌ مِّنْهُمْ یَخْشَوْنَ النَّاسَ كَخَشْیَةِ اللّٰهِ اَوْ اَشَدَّ خَشْیَةً ۚ— وَقَالُوْا رَبَّنَا لِمَ كَتَبْتَ عَلَیْنَا الْقِتَالَ ۚ— لَوْلَاۤ اَخَّرْتَنَاۤ اِلٰۤی اَجَلٍ قَرِیْبٍ ؕ— قُلْ مَتَاعُ الدُّنْیَا قَلِیْلٌ ۚ— وَالْاٰخِرَةُ خَیْرٌ لِّمَنِ اتَّقٰی ۫— وَلَا تُظْلَمُوْنَ فَتِیْلًا ۟

“ನಿಮ್ಮ ಕೈಗಳನ್ನು ತಡೆಹಿಡಿಯಿರಿ, ನಮಾಝ್ ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ” ಎಂದು ಆದೇಶಿಸಲಾದ ಜನರನ್ನು ನೀವು ನೋಡಿಲ್ಲವೇ? ಅವರಿಗೆ ಯುದ್ಧವನ್ನು ಕಡ್ಡಾಯಗೊಳಿಸಲಾದಾಗ ಅವರಲ್ಲೊಂದು ಗುಂಪು ಅಲ್ಲಾಹನನ್ನು ಭಯಪಡುವಂತೆ ಅಥವಾ ಅದಕ್ಕಿಂತಲೂ ತೀವ್ರವಾಗಿ ಜನರನ್ನು ಭಯಪಡುತ್ತಾರೆ! ಅವರು ಕೇಳುತ್ತಾರೆ: “ಓ ನಮ್ಮ ಪರಿಪಾಲಕನೇ! ನಮಗೆ ಯುದ್ಧವನ್ನು (ಈಗಲೇ) ಏಕೆ ಕಡ್ಡಾಯಗೊಳಿಸಿದೆ? ಹತ್ತಿರದ ಒಂದು ಅವಧಿಯ ತನಕ ನಮಗೆ ಕಾಲಾವಕಾಶ ನೀಡಬಹುದಿತ್ತಲ್ಲವೇ?” ಹೇಳಿರಿ: “ಇಹಲೋಕದ ಆನಂದವು ಅತ್ಯಲ್ಪವಾಗಿದೆ. ದೇವಭಯವುಳ್ಳವರಿಗೆ ಪರಲೋಕವು ಅತ್ಯುತ್ತಮವಾಗಿದೆ. ನಿಮಗೆ (ಖರ್ಜೂರದ ಬೀಜದಲ್ಲಿರುವ) ನೂಲಿನಷ್ಟೂ ಅನ್ಯಾಯವಾಗುವುದಿಲ್ಲ.” info
التفاسير:

external-link copy
78 : 4

اَیْنَمَا تَكُوْنُوْا یُدْرِكْكُّمُ الْمَوْتُ وَلَوْ كُنْتُمْ فِیْ بُرُوْجٍ مُّشَیَّدَةٍ ؕ— وَاِنْ تُصِبْهُمْ حَسَنَةٌ یَّقُوْلُوْا هٰذِهٖ مِنْ عِنْدِ اللّٰهِ ۚ— وَاِنْ تُصِبْهُمْ سَیِّئَةٌ یَّقُوْلُوْا هٰذِهٖ مِنْ عِنْدِكَ ؕ— قُلْ كُلٌّ مِّنْ عِنْدِ اللّٰهِ ؕ— فَمَالِ هٰۤؤُلَآءِ الْقَوْمِ لَا یَكَادُوْنَ یَفْقَهُوْنَ حَدِیْثًا ۟

ನೀವೆಲ್ಲೇ ಇದ್ದರೂ ಸಾವು ನಿಮ್ಮನ್ನು ಬೆನ್ನಟ್ಟುತ್ತದೆ. ನೀವು ಸುಭದ್ರ ಕೋಟೆಯೊಳಗಿದ್ದರೂ ಸಹ. ಅವರಿಗೆ ಒಳಿತುಂಟಾದರೆ, “ಇದು ಅಲ್ಲಾಹನಿಂದ” ಎಂದು ಅವರು ಹೇಳುತ್ತಾರೆ. ಆದರೆ ಅವರಿಗೆ ಕೆಡುಕುಂಟಾದರೆ, “ಇದು ನಿಮ್ಮಿಂದ” ಎನ್ನುತ್ತಾರೆ. ಹೇಳಿರಿ: “ಎಲ್ಲವೂ ಅಲ್ಲಾಹನಿಂದಲೇ ಆಗಿದೆ.” ಈ ಜನರಿಗೇನಾಗಿದೆ? ಇವರೇಕೆ ಮಾತನ್ನು ಅರ್ಥಮಾಡಿಕೊಳ್ಳುವುದಿಲ್ಲ? info
التفاسير:

external-link copy
79 : 4

مَاۤ اَصَابَكَ مِنْ حَسَنَةٍ فَمِنَ اللّٰهِ ؗ— وَمَاۤ اَصَابَكَ مِنْ سَیِّئَةٍ فَمِنْ نَّفْسِكَ ؕ— وَاَرْسَلْنٰكَ لِلنَّاسِ رَسُوْلًا ؕ— وَكَفٰی بِاللّٰهِ شَهِیْدًا ۟

ನಿಮಗೇನಾದರೂ ಒಳಿತುಂಟಾದರೆ ಅದು ಅಲ್ಲಾಹನಿಂದ. ನಿಮಗೆ ಕೆಡುಕು ಬಾಧಿಸಿದರೆ, ಅದು ನಿಮ್ಮಿಂದಲೇ ಆಗಿದೆ. ನಾವು ನಿಮ್ಮನ್ನು ಮನುಷ್ಯರಿಗೆ ಸಂದೇಶವಾಹಕನನ್ನಾಗಿ ಮಾಡಿ ಕಳುಹಿಸಿದ್ದೇವೆ. ಸಾಕ್ಷಿಯಾಗಿ ಅಲ್ಲಾಹು ಸಾಕು. info
التفاسير: