[1] ಈ ವಚನವನ್ನು ಆಯತುಲ್ ಮುಬಾಹಲ (ಶಾಪಪ್ರಾರ್ಥನೆಯ ವಚನ) ಎಂದು ಕರೆಯಲಾಗುತ್ತದೆ. ಎರಡು ಗುಂಪುಗಳ ನಡುವೆ ಭಿನ್ನಮತವಿರುವ ಒಂದು ವಿಷಯವು ಮಾತುಕತೆಯಿಂದ ಅಥವಾ ಇತರ ವಿಧಾನಗಳಿಂದ ಪರಿಹಾರವಾಗದೆ, ಎರಡು ಗುಂಪುಗಳೂ ನಾವೇ ಸತ್ಯದಲ್ಲಿರುವವರು ಎಂದು ಹಟ ಹಿಡಿದರೆ, ಆ ಎರಡು ಗುಂಪುಗಳು ಸೇರಿ ಅಸತ್ಯದಲ್ಲಿರುವ ಗುಂಪಿನ ಮೇಲೆ ಅಲ್ಲಾಹನ ಶಾಪವಿರಲಿ ಎಂದು ಅಲ್ಲಾಹನಲ್ಲಿ ಮನಸಾರೆ ಪ್ರಾರ್ಥಿಸುವುದನ್ನು ಶಾಪ ಪ್ರಾರ್ಥನೆ ಎನ್ನಲಾಗುತ್ತದೆ.