Terjemahan makna Alquran Alkarim - Terjemahan Berbahasa Kannada - Basir Maisuri

external-link copy
213 : 2

كَانَ النَّاسُ اُمَّةً وَّاحِدَةً ۫— فَبَعَثَ اللّٰهُ النَّبِیّٖنَ مُبَشِّرِیْنَ وَمُنْذِرِیْنَ ۪— وَاَنْزَلَ مَعَهُمُ الْكِتٰبَ بِالْحَقِّ لِیَحْكُمَ بَیْنَ النَّاسِ فِیْمَا اخْتَلَفُوْا فِیْهِ ؕ— وَمَا اخْتَلَفَ فِیْهِ اِلَّا الَّذِیْنَ اُوْتُوْهُ مِنْ بَعْدِ مَا جَآءَتْهُمُ الْبَیِّنٰتُ بَغْیًا بَیْنَهُمْ ۚ— فَهَدَی اللّٰهُ الَّذِیْنَ اٰمَنُوْا لِمَا اخْتَلَفُوْا فِیْهِ مِنَ الْحَقِّ بِاِذْنِهٖ ؕ— وَاللّٰهُ یَهْدِیْ مَنْ یَّشَآءُ اِلٰی صِرَاطٍ مُّسْتَقِیْمٍ ۟

ಮನುಷ್ಯರು ಒಂದೇ ಸಮುದಾಯವಾಗಿದ್ದರು(ಕಾಲಕ್ರಮೇಣ ಅವರಲ್ಲಿ ಭಿನ್ನಭಿಪ್ರಾಯ ಉಂಟಾದಾಗ) ಅಲ್ಲಾಹನು ಸುವಾರ್ತೆ ನೀಡುವವರನ್ನಾಗಿಯು ಎಚ್ಚರಿಕೆ ಕೊಡುವವರನ್ನಾಗಿಯು ಪೈಗಂಬರರÀನ್ನು ನಿಯೋಗಿಸಿದನು ಮತ್ತು ಜನರು ನಡುವಿನ ಭಿನ್ನತೆಯ ವಿಷಯಗಳಲ್ಲಿ ತೀರ್ಪುನೀಡಲೆಂದು ಅವರ ಜೊತೆ ಸತ್ಯದೊಂದಿಗೆ ಗ್ರಂಥಗಳನ್ನು ಅವತೀರ್ಣಗೊಳಿಸಿದನು. ಆದರೆ ಗ್ರಂಥ ನೀಡಲಾದವರು ತಮ್ಮಲ್ಲಿಗೆ ಸುಸ್ಪಷ್ಟ ಪುರಾವೆಗಳು ಬಂದ ಬಳಿಕವೂ ಪರಸ್ಪರ ಹಟ ಹಾಗು ಹಗೆತನದ ಕಾರಣದಿಂದ ಅದರಲ್ಲಿ ಭಿನ್ನತೆಯನ್ನುಂಟು ಮಾಡಿದ್ದರು. ಆದ್ದರಿಂದ ಅಲ್ಲಾಹನು ಅವರು ಯಾವ ಸತ್ಯದಲ್ಲಿ ಭಿನ್ನತೆ ಹೊಂದಿದ್ದರೋ ಆ ಸತ್ಯದೆಡೆಗೆ ತನ್ನ ಇಚ್ಛೆ ಪ್ರಕಾರ ಸತ್ಯವಿಶ್ವಾಸಿಗಳಿಗೆ ಮಾರ್ಗದರ್ಶನ ಮಾಡಿದನು ಮತ್ತು ಅಲ್ಲಾಹನು ತಾನಿಚ್ಛಿಸಿದವರನ್ನು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ. info
التفاسير: