Terjemahan makna Alquran Alkarim - Terjemahan Berbahasa Kannada - Basir Maisuri

external-link copy
266 : 2

اَیَوَدُّ اَحَدُكُمْ اَنْ تَكُوْنَ لَهٗ جَنَّةٌ مِّنْ نَّخِیْلٍ وَّاَعْنَابٍ تَجْرِیْ مِنْ تَحْتِهَا الْاَنْهٰرُ ۙ— لَهٗ فِیْهَا مِنْ كُلِّ الثَّمَرٰتِ ۙ— وَاَصَابَهُ الْكِبَرُ وَلَهٗ ذُرِّیَّةٌ ضُعَفَآءُ ۖۚ— فَاَصَابَهَاۤ اِعْصَارٌ فِیْهِ نَارٌ فَاحْتَرَقَتْ ؕ— كَذٰلِكَ یُبَیِّنُ اللّٰهُ لَكُمُ الْاٰیٰتِ لَعَلَّكُمْ تَتَفَكَّرُوْنَ ۟۠

ನಿಮ್ಮಲ್ಲೊಬ್ಬನಿಗೆ ಖರ್ಜೂರದ ಮರಗಳು ಮತ್ತು ದ್ರಾಕ್ಷಿ ಬಳ್ಳಿಗಳಿರುವ ಒಂದು ತೋಟವಿದ್ದು, ಅದರ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿವೆ, ಅದರಲ್ಲಿ ಅವನಿಗೆ ಎಲ್ಲಾ ವಿಧದ ಫಲಗಳಿವೆ, ಅವನಿಗೆ ವೃದ್ಧಾಪ್ಯವು ಬಾಧಿಸಿದೆ, ಅವನ ಚಿಕ್ಕ ಚಿಕ್ಕ ಮಕ್ಕಳೂ ಇದ್ದಾರೆ. ಆಗ ಅಗ್ನಿ ಮಾರುತವೊಂದು ಅದಕ್ಕೆ ತಗುಲಿ ಅದು ಸುಟ್ಟು ಹೋಗುವುದನ್ನು ನಿಮ್ಮಲ್ಲಿ ಯಾರಾದರೂ ಆಶಿಸುವರೇ? ನೀವು ಚಿಂತಿಸಿ ಗ್ರಹಿಸುವುದಕ್ಕಾಗಿ ಅಲ್ಲಾಹನು ನಿಮಗೆ ಈ ರೀತಿ ದೃಷ್ಟಾಂತಗಳನ್ನು ವಿವರಿಸಿ ಕೊಡುತ್ತಾನೆ(ಇದೇ ಪ್ರಕಾರ ಯಾವೊಬ್ಬನು ತನ್ನ ಪುಣ್ಯಗಳು ವ್ಯರ್ಥವಾಗುವುದನ್ನು ಬಯಸುತ್ತಾನೆಯೇ). info
التفاسير: