[1] ಹೊಲಸು ವಚನ ಎಂದರೆ ದೇವಸಹಭಾಗಿತ್ವ (ಶಿರ್ಕ್) ಮತ್ತು ಸತ್ಯನಿಷೇಧ (ಕುಫ್ರ್) ದ ವಚನಗಳು. ಈ ವಚನಕ್ಕೆ ಯಾವುದೇ ಅಡಿಪಾಯವಿಲ್ಲ. ಒಂದು ಸಣ್ಣ ಗಾಳಿಗೂ ಇದು ಕಿತ್ತು ಹೋಗಬಹುದು. ದೇವಸಹಭಾಗಿತ್ವ ಮತ್ತು ಸತ್ಯನಿಷೇಧದಲ್ಲಿ ಬದುಕುವವರ ಜೀವನವು ಸುಭದ್ರವಲ್ಲ. ಅವರಿಗೆ ಆತ್ಮಶಾಂತಿಯಿರುವುದಿಲ್ಲ. ಒಂದು ಸಣ್ಣ ಕಷ್ಟ ಬಂದರೂ ಅವರು ಧೃತಿಗೆಡುತ್ತಾರೆ. ಕೆಲವೊಮ್ಮೆ ತಮ್ಮ ಜೀವನವನ್ನೇ ಕೊನೆಗೊಳಿಸುತ್ತಾರೆ. ಪರಲೋಕದಲ್ಲಿ ಅವರ ಕರ್ಮಗಳಿಗೆ ಯಾವುದೇ ಪ್ರತಿಫಲವಿರುವುದಿಲ್ಲ.
[1] ಇಹಲೋಕ ಜೀವನದಲ್ಲಿ, ಮರಣದ ಸಂದರ್ಭ ಮತ್ತು ಸಮಾಧಿಯಲ್ಲಿ ಪ್ರಶ್ನೆ ಕೇಳಲಾಗುವ ಸಂದರ್ಭ ಅಲ್ಲಾಹು ಸತ್ಯವಿಶ್ವಾಸಿಗಳನ್ನು ‘ಲಾಇಲಾಹ ಇಲ್ಲಲ್ಲಾಹ್ ಮುಹಮ್ಮದ್ ರಸೂಲುಲ್ಲಾಹ್’ ಎಂಬ ವಚನದಲ್ಲಿ ದೃಢವಾಗಿ ನಿಲ್ಲಿಸುತ್ತಾನೆ.