[1] ಅವರು ಕುರ್ಆನ್ ಪಠಣಕ್ಕೆ ಕಿವಿಗೊಡುತ್ತಾರೆ. ಅದೇ ರೀತಿ ನೀವು ಪಠಿಸುವಾಗ ಅವರು ನಿಮ್ಮನ್ನು ಗಮನದಿಂದ ನೋಡುತ್ತಾರೆ. ಆದರೆ ಅವರ ಉದ್ದೇಶವು ಬೇರೆಯೇ ಆಗಿರುತ್ತದೆ. ಕುರ್ಆನ್ ಕಲಿಯುವುದು ಅಥವಾ ಅರ್ಥಮಾಡಿಕೊಳ್ಳುವುದು ಅವರ ಉದ್ದೇಶವಲ್ಲ. ಇಂತಹ ಜನರು ಕಿವುಡರು ಮತ್ತು ಕುರುಡರಂತೆ.
[1] ಇದಕ್ಕೆ ಎರಡು ರೀತಿಯ ವ್ಯಾಖ್ಯಾನಗಳಿವೆ. 1. ಅಲ್ಲಾಹು ಎಲ್ಲಾ ಸಮುದಾಯಗಳಿಗೆ ಪ್ರವಾದಿಗಳನ್ನು ಕಳುಹಿಸುತ್ತಾನೆ. ಒಂದು ಸಮುದಾಯಕ್ಕೆ ಪ್ರವಾದಿಯ ಆಗಮನವಾಗಿ ಅವರು ತಮ್ಮ ಕರ್ತವ್ಯವನ್ನು ಪೂರೈಸಿದ ನಂತರ ಅಲ್ಲಾಹು ಆ ಸಮುದಾಯದ ವಿಷಯದಲ್ಲಿ ನ್ಯಾಯಯುತವಾಗಿ ತೀರ್ಮಾನ ಕೈಗೊಳ್ಳುತ್ತಾನೆ. ಅಂದರೆ ಪ್ರವಾದಿಯನ್ನು ಮತ್ತು ಸತ್ಯವಿಶ್ವಾಸಿಗಳನ್ನು ರಕ್ಷಿಸುತ್ತಾನೆ ಹಾಗೂ ಸತ್ಯನಿಷೇಧಿಗಳನ್ನು ಶಿಕ್ಷಿಸುತ್ತಾನೆ. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ. 2. ಪುನರುತ್ಥಾನ ದಿನದಂದು ಎಲ್ಲಾ ಸಮುದಾಯಗಳು ತಮ್ಮ ತಮ್ಮ ಪ್ರವಾದಿಗಳೊಡನೆ ಬರುತ್ತಾರೆ. ಅಲ್ಲಿ ಕರ್ಮಪುಸ್ತಕಗಳನ್ನು ಇಡಲಾಗುತ್ತದೆ ಮತ್ತು ಸಾಕ್ಷಿ ಹೇಳಲು ದೇವದೂತರುಗಳು ಬರುತ್ತಾರೆ. ಅಲ್ಲಾಹು ಆ ಸಮುದಾಯದ ವಿಷಯದಲ್ಲಿ ನ್ಯಾಯಯುತವಾಗಿ ತೀರ್ಪು ನೀಡುತ್ತಾನೆ. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ.