ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
213 : 2

كَانَ النَّاسُ اُمَّةً وَّاحِدَةً ۫— فَبَعَثَ اللّٰهُ النَّبِیّٖنَ مُبَشِّرِیْنَ وَمُنْذِرِیْنَ ۪— وَاَنْزَلَ مَعَهُمُ الْكِتٰبَ بِالْحَقِّ لِیَحْكُمَ بَیْنَ النَّاسِ فِیْمَا اخْتَلَفُوْا فِیْهِ ؕ— وَمَا اخْتَلَفَ فِیْهِ اِلَّا الَّذِیْنَ اُوْتُوْهُ مِنْ بَعْدِ مَا جَآءَتْهُمُ الْبَیِّنٰتُ بَغْیًا بَیْنَهُمْ ۚ— فَهَدَی اللّٰهُ الَّذِیْنَ اٰمَنُوْا لِمَا اخْتَلَفُوْا فِیْهِ مِنَ الْحَقِّ بِاِذْنِهٖ ؕ— وَاللّٰهُ یَهْدِیْ مَنْ یَّشَآءُ اِلٰی صِرَاطٍ مُّسْتَقِیْمٍ ۟

ಮಾನವರೆಲ್ಲರೂ ಒಂದೇ ಸಮುದಾಯವಾಗಿದ್ದರು. ನಂತರ ಅಲ್ಲಾಹು ಸುವಾರ್ತೆ ತಿಳಿಸಲು ಮತ್ತು ಎಚ್ಚರಿಕೆ ನೀಡಲು ಪ್ರವಾದಿಗಳನ್ನು ಕಳುಹಿಸಿದನು. ಜನರು ಭಿನ್ನಾಭಿಪ್ರಾಯ ತಳೆದ ವಿಷಯದಲ್ಲಿ ತೀರ್ಪು ನೀಡುವುದಕ್ಕಾಗಿ ಅವರ ಜೊತೆಗೆ ಗ್ರಂಥವನ್ನು ಸತ್ಯ ಸಮೇತ ಅವತೀರ್ಣಗೊಳಿಸಿದನು. ಆದರೆ ಗ್ರಂಥ ನೀಡಲಾದ ಅದೇ ಜನರು ಸ್ಪಷ್ಟ ಸಾಕ್ಷ್ಯಾಧಾರಗಳು ತಮಗೆ ತಲುಪಿದ ಬಳಿಕವೂ ತಮ್ಮೊಳಗಿನ ವಿದ್ವೇಷದ ನಿಮಿತ್ತ ಅದರ (ಗ್ರಂಥದ) ವಿಷಯದಲ್ಲಿ ಭಿನ್ನಮತ ತಳೆದರು. ಆದ್ದರಿಂದ ಅಲ್ಲಾಹು ತನ್ನ ಅಪ್ಪಣೆ ಪ್ರಕಾರ ಅವರು ಭಿನ್ನಮತೀಯರಾದ ಆ ಸತ್ಯಕ್ಕೆ ಸತ್ಯವಿಶ್ವಾಸಿಗಳನ್ನು ಮುನ್ನಡೆಸಿದನು. ಅಲ್ಲಾಹು ಅವನು ಇಚ್ಛಿಸಿದವರನ್ನು ನೇರಮಾರ್ಗಕ್ಕೆ ಮುನ್ನಡೆಸುತ್ತಾನೆ. info
التفاسير: