[1] ಇಲ್ಲಿ ಯಹೂದಿಗಳು ಹೇಳಿದ ಇನ್ನೊಂದು ಸುಳ್ಳನ್ನು ಕೂಡ ಅನಾವರಣಗೊಳಿಸಲಾಗಿದೆ. ಅದೇನೆಂದರೆ ಅವರು ಹೇಳುತ್ತಿದ್ದರು: “ಒಬ್ಬ ವ್ಯಕ್ತಿ ನಿಮ್ಮ ಬಳಿಗೆ ಬಂದು ಅಲ್ಲಾಹನಲ್ಲಿ ಪ್ರಾರ್ಥಿಸಿದಾಗ ಆಕಾಶದಿಂದ ಬೆಂಕಿ ಸುರಿದು ನೀವು ಅಲ್ಲಾಹನಿಗೆ ಕುರ್ಬಾನಿ ಮಾಡಿದ ಪ್ರಾಣಿಯನ್ನು ಅದು ಭಕ್ಷಿಸಿದರೆ ಮಾತ್ರ ಆ ವ್ಯಕ್ತಿಯನ್ನು ಪ್ರವಾದಿಯೆಂದು ನಂಬಿರಿ. ಇಲ್ಲದಿದ್ದರೆ ನಂಬಬೇಡಿ ಎಂದು ಅಲ್ಲಾಹು ನಮ್ಮೊಡನೆ ಕರಾರು ಪಡೆದಿದ್ದಾನೆ. ನೀವು ಆ ಪವಾಡವನ್ನು ತೋರಿಸಿಲ್ಲ. ಆದ್ದರಿಂದ ನಾವು ನಿಮ್ಮಲ್ಲಿ ವಿಶ್ವಾಸವಿಡುವುದಿಲ್ಲ.” ಆದರೆ ಇದು ಅವರು ಹೇಳುವ ಒಂದು ನೆಪ ಮಾತ್ರ. ಏಕೆಂದರೆ ಇದಕ್ಕಿಂತ ಮೊದಲು ಇಂತಹ ಅನೇಕ ಪವಾಡಗಳನ್ನು ತೋರಿಸಿದ ಪ್ರವಾದಿಗಳನ್ನು ಇವರ ಪೂರ್ವಜರು ತಿರಸ್ಕರಿಸಿದ್ದರು ಮತ್ತು ನಿರ್ದಯವಾಗಿ ಕೊಂದು ಹಾಕಿದ್ದರು.