ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

លេខ​ទំព័រ:close

external-link copy
27 : 38

وَمَا خَلَقْنَا السَّمَآءَ وَالْاَرْضَ وَمَا بَیْنَهُمَا بَاطِلًا ؕ— ذٰلِكَ ظَنُّ الَّذِیْنَ كَفَرُوْا ۚ— فَوَیْلٌ لِّلَّذِیْنَ كَفَرُوْا مِنَ النَّارِ ۟ؕ

ನಾವು ಆಕಾಶ, ಭೂಮಿ ಮತ್ತು ಅವುಗಳ ನಡುವೆಯಿರುವ ವಸ್ತುಗಳನ್ನು ವ್ಯರ್ಥವಾಗಿ ಸೃಷ್ಟಿಸಿಲ್ಲ. ಅದು ಸತ್ಯನಿಷೇಧಿಗಳ ಊಹೆಯಾಗಿದೆ. ಸತ್ಯನಿಷೇಧಿಗಳಿಗೆ ನರಕ ಶಿಕ್ಷೆಯ ವಿನಾಶ ಕಾದಿದೆ. info
التفاسير:

external-link copy
28 : 38

اَمْ نَجْعَلُ الَّذِیْنَ اٰمَنُوْا وَعَمِلُوا الصّٰلِحٰتِ كَالْمُفْسِدِیْنَ فِی الْاَرْضِ ؗ— اَمْ نَجْعَلُ الْمُتَّقِیْنَ كَالْفُجَّارِ ۟

ನಾವು ಸತ್ಯವಿಶ್ವಾಸಿಗಳನ್ನು ಮತ್ತು ಸತ್ಕರ್ಮವೆಸಗಿದವರನ್ನು ಭೂಮಿಯಲ್ಲಿ ನಿರಂತರ ಕಿಡಿಗೇಡಿತನ ಹರಡುವವರಂತೆ ಮಾಡುವೆವೇ? ಅಥವಾ ನಾವು ದೇವಭಯವುಳ್ಳವರನ್ನು ದುಷ್ಕರ್ಮಿಗಳಂತೆ ಮಾಡುವೆವೇ? info
التفاسير:

external-link copy
29 : 38

كِتٰبٌ اَنْزَلْنٰهُ اِلَیْكَ مُبٰرَكٌ لِّیَدَّبَّرُوْۤا اٰیٰتِهٖ وَلِیَتَذَكَّرَ اُولُوا الْاَلْبَابِ ۟

ಇದು ನಾವು ನಿಮಗೆ ಅವತೀರ್ಣಗೊಳಿಸಿದ ಸಮೃದ್ಧಪೂರ್ಣ ಗ್ರಂಥವಾಗಿದೆ. ಇದರಲ್ಲಿರುವ ವಚನಗಳ ಬಗ್ಗೆ ಅವರು ಆಲೋಚಿಸುವುದಕ್ಕಾಗಿ ಮತ್ತು ಬುದ್ಧಿವಂತರು ಉಪದೇಶ ಪಡೆಯುವುದಕ್ಕಾಗಿ. info
التفاسير:

external-link copy
30 : 38

وَوَهَبْنَا لِدَاوٗدَ سُلَیْمٰنَ ؕ— نِعْمَ الْعَبْدُ ؕ— اِنَّهٗۤ اَوَّابٌ ۟ؕ

ನಾವು ದಾವೂದರಿಗೆ ಸುಲೈಮಾನರನ್ನು ದಯಪಾಲಿಸಿದೆವು. ಅತ್ಯುತ್ತಮ ದಾಸ! ಅವರು ಅತ್ಯಧಿಕ ಪಶ್ಚಾತ್ತಾಪಪಡುವವರಾಗಿದ್ದರು. info
التفاسير:

external-link copy
31 : 38

اِذْ عُرِضَ عَلَیْهِ بِالْعَشِیِّ الصّٰفِنٰتُ الْجِیَادُ ۟ۙ

ಸಂಜೆ ಅವರ ಮುಂದೆ ವೇಗವಾಗಿ ಓಡುವ ವಿಶಿಷ್ಟ ಕುದುರೆಗಳನ್ನು ಹಾಜರುಪಡಿಸಿದ ಸಂದರ್ಭ! info
التفاسير:

external-link copy
32 : 38

فَقَالَ اِنِّیْۤ اَحْبَبْتُ حُبَّ الْخَیْرِ عَنْ ذِكْرِ رَبِّیْ ۚ— حَتّٰی تَوَارَتْ بِالْحِجَابِ ۟۫

ಅವರು ಹೇಳಿದರು: “ನಾನು ನನ್ನ ಪರಿಪಾಲಕನ (ಅಲ್ಲಾಹನ) ಸ್ಮರಣೆಗಿಂತಲೂ ಈ ಕುದುರೆಗಳಿಗೆ ಪ್ರಾಶಸ್ತ್ಯ ನೀಡಿದೆನು; ಎಲ್ಲಿಯವರೆಗೆಂದರೆ ಸೂರ್ಯ ಮುಳುಗುವ ತನಕ.” info
التفاسير:

external-link copy
33 : 38

رُدُّوْهَا عَلَیَّ ؕ— فَطَفِقَ مَسْحًا بِالسُّوْقِ وَالْاَعْنَاقِ ۟

(ಅವರು ಹೇಳಿದರು): “ಅವುಗಳನ್ನು ನನ್ನ ಬಳಿಗೆ ಮರಳಿ ತನ್ನಿ.” ನಂತರ ಅವರು (ಅವುಗಳ) ಕಣಕಾಲು ಮತ್ತು ಕತ್ತುಗಳನ್ನು ಸವರಲು ಆರಂಭಿಸಿದರು. info
التفاسير:

external-link copy
34 : 38

وَلَقَدْ فَتَنَّا سُلَیْمٰنَ وَاَلْقَیْنَا عَلٰی كُرْسِیِّهٖ جَسَدًا ثُمَّ اَنَابَ ۟

ನಾವು ಸುಲೈಮಾನರನ್ನು ಪರೀಕ್ಷಿಸಿದೆವು. ನಾವು ಅವರ ಸಿಂಹಾಸನದ ಮೇಲೆ ಒಂದು ದೇಹವನ್ನು ಹಾಕಿದೆವು. ನಂತರ ಅವರು ವಿನಮ್ರತೆಯಿಂದ ಮರಳಿದರು. info
التفاسير:

external-link copy
35 : 38

قَالَ رَبِّ اغْفِرْ لِیْ وَهَبْ لِیْ مُلْكًا لَّا یَنْۢبَغِیْ لِاَحَدٍ مِّنْ بَعْدِیْ ۚ— اِنَّكَ اَنْتَ الْوَهَّابُ ۟

ಅವರು ಹೇಳಿದರು: “ನನ್ನ ಪರಿಪಾಲಕನೇ! ನನ್ನನ್ನು ಕ್ಷಮಿಸು. ನನ್ನ ಬಳಿಕ ಯಾರಿಗೂ ಹೊಂದಿಕೆಯಾಗದಂತಹ ಒಂದು ಸಾಮ್ರಾಜ್ಯವನ್ನು ನನಗೆ ಕರುಣಿಸು. ನಿಶ್ಚಯವಾಗಿಯೂ ನೀನು ಅತ್ಯಧಿಕ ಉದಾರಿಯಾಗಿರುವೆ.” info
التفاسير:

external-link copy
36 : 38

فَسَخَّرْنَا لَهُ الرِّیْحَ تَجْرِیْ بِاَمْرِهٖ رُخَآءً حَیْثُ اَصَابَ ۟ۙ

ನಾವು ಅವರಿಗೆ ಗಾಳಿಯನ್ನು ಅಧೀನಗೊಳಿಸಿದೆವು. ಅದು ಅವರ ಆಜ್ಞೆಯಂತೆ ಅವರು ಬಯಸಿದ ಕಡೆಗೆ ಅವರನ್ನು ಮೃದುವಾಗಿ ಒಯ್ಯುತ್ತಿತ್ತು. info
التفاسير:

external-link copy
37 : 38

وَالشَّیٰطِیْنَ كُلَّ بَنَّآءٍ وَّغَوَّاصٍ ۟ۙ

ಕಟ್ಟಡ ನಿರ್ಮಾಣಗಾರು ಮತ್ತು ಮುಳುಗುಗಾರರಾದ ಎಲ್ಲಾ ಶೈತಾನರನ್ನು (ನಾನು ಅವರಿಗೆ ಅಧೀನಗೊಳಿಸಿದೆವು). info
التفاسير:

external-link copy
38 : 38

وَّاٰخَرِیْنَ مُقَرَّنِیْنَ فِی الْاَصْفَادِ ۟

ಸಂಕೋಲೆಗಳಲ್ಲಿ ಬಂಧಿಸಲಾದ ಇತರ ಕೆಲವು (ಶೈತಾನರನ್ನೂ ಅಧೀನಗೊಳಿಸಿದೆವು). info
التفاسير:

external-link copy
39 : 38

هٰذَا عَطَآؤُنَا فَامْنُنْ اَوْ اَمْسِكْ بِغَیْرِ حِسَابٍ ۟

“ಇದು ನಮ್ಮ ಉಡುಗೊರೆಯಾಗಿದೆ. ನೀವು ಉಪಕಾರ ಮಾಡಿರಿ ಅಥವಾ ತಡೆದುಕೊಳ್ಳಿರಿ. ಯಾವುದೇ ಲೆಕ್ಕ ನೀಡಬೇಕಾಗಿಲ್ಲ.”[1] info

[1] ಈ ಮಹಾ ಸಾಮ್ರಾಜ್ಯವು ನಮ್ಮ ಉಡುಗೊರೆಯಾಗಿದೆ. ನೀವು ಬಯಸುವವರಿಗೆ ಇದನ್ನು ನೀಡಬಹುದು. ನೀವು ಬಯಸದವರಿಗೆ ನೀಡದೇ ಇರಬಹುದು. ಈ ಬಗ್ಗೆ ನಾವು ನಿಮ್ಮೊಡನೆ ಯಾವುದೇ ಲೆಕ್ಕ ಕೇಳುವುದಿಲ್ಲ.

التفاسير:

external-link copy
40 : 38

وَاِنَّ لَهٗ عِنْدَنَا لَزُلْفٰی وَحُسْنَ مَاٰبٍ ۟۠

ನಿಶ್ಚಯವಾಗಿಯೂ ಅವರಿಗೆ ನಮ್ಮ ಬಳಿ ಸಾಮೀಪ್ಯವಿದೆ ಮತ್ತು ಅತ್ಯುತ್ತಮವಾದ ಠಿಕಾಣಿಯಿದೆ. info
التفاسير:

external-link copy
41 : 38

وَاذْكُرْ عَبْدَنَاۤ اَیُّوْبَ ۘ— اِذْ نَادٰی رَبَّهٗۤ اَنِّیْ مَسَّنِیَ الشَّیْطٰنُ بِنُصْبٍ وَّعَذَابٍ ۟ؕ

ನಮ್ಮ ದಾಸರಾದ ಅಯ್ಯೂಬರನ್ನು ಸ್ಮರಿಸಿರಿ. ಅವರು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿದ ಸಂದರ್ಭ: “ಶೈತಾನನು ನನಗೆ ಬಳಲಿಕೆ ಮತ್ತು ದುಃಖವುಂಟಾಗುವಂತೆ ಮಾಡಿದ್ದಾನೆ.” info
التفاسير:

external-link copy
42 : 38

اُرْكُضْ بِرِجْلِكَ ۚ— هٰذَا مُغْتَسَلٌۢ بَارِدٌ وَّشَرَابٌ ۟

(ನಾವು ಹೇಳಿದೆವು): “ನಿಮ್ಮ ಕಾಲಿನಿಂದ (ನೆಲಕ್ಕೆ) ಬಡಿಯಿರಿ. ಇದು ತಂಪಾದ ಸ್ನಾನದ ನೀರು ಮತ್ತು ಕುಡಿಯುವ ನೀರಾಗಿದೆ.”[1] info

[1] ಅಯ್ಯೂಬ್ (ಅವರ ಮೇಲೆ ಶಾಂತಿಯಿರಲಿ) ಕಾಲನ್ನು ನೆಲಕ್ಕೆ ಬಡಿದಾಗ, ಅಲ್ಲಿ ಒಂದು ಚಿಲುಮೆ ಚಿಮ್ಮಿ ಹರಿಯಿತು. ಅವರು ಅದರ ನೀರನ್ನು ಕುಡಿದಾಗ ಅವರ ಆಂತರಿಕ ರೋಗಗಳು ಗುಣವಾದವು ಮತ್ತು ಅದರಲ್ಲಿ ಸ್ನಾನ ಮಾಡಿದಾಗ ಹೊರಗಿನ ರೋಗಗಳು ಗುಣವಾದವು.

التفاسير: