ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

លេខ​ទំព័រ:close

external-link copy
16 : 42

وَالَّذِیْنَ یُحَآجُّوْنَ فِی اللّٰهِ مِنْ بَعْدِ مَا اسْتُجِیْبَ لَهٗ حُجَّتُهُمْ دَاحِضَةٌ عِنْدَ رَبِّهِمْ وَعَلَیْهِمْ غَضَبٌ وَّلَهُمْ عَذَابٌ شَدِیْدٌ ۟

ಜನರು ಅಲ್ಲಾಹನ ಮಾತನ್ನು ಅಂಗೀಕರಿಸಿದ[1] ಬಳಿಕ ಅಲ್ಲಾಹನ ವಿಷಯದಲ್ಲಿ ತರ್ಕಿಸುವವರು ಯಾರೋ ಅವರ ತರ್ಕವು ಅಲ್ಲಾಹನ ದೃಷ್ಟಿಯಲ್ಲಿ ನಿರರ್ಥಕವಾಗಿದೆ. ಅವರ ಮೇಲೆ ಕೋಪವಿದೆ ಮತ್ತು ಅವರಿಗೆ ಕಠೋರ ಶಿಕ್ಷೆಯಿದೆ. info

[1] ಅಂದರೆ ಸತ್ಯವಿಶ್ವಾಸಿಗಳು ಅಲ್ಲಾಹನ ಮತ್ತು ಪ್ರವಾದಿಯ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಾತನ್ನು ಅಂಗೀಕರಿಸಿ ಅವರಲ್ಲಿ ವಿಶ್ವಾಸವಿಟ್ಟಿದ್ದಾರೆ. ಸತ್ಯನಿಷೇಧಿಗಳು ಅವರೊಡನೆ ತರ್ಕಿಸುತ್ತಾ, ಜಗಳವಾಡುತ್ತಾ ಅವರನ್ನು ಪುನಃ ಹಿಂದಿನ ಧರ್ಮಕ್ಕೆ ಮರಳಿಸಲು ಪ್ರಯತ್ನಿಸುತ್ತಾರೆ.

التفاسير:

external-link copy
17 : 42

اَللّٰهُ الَّذِیْۤ اَنْزَلَ الْكِتٰبَ بِالْحَقِّ وَالْمِیْزَانَ ؕ— وَمَا یُدْرِیْكَ لَعَلَّ السَّاعَةَ قَرِیْبٌ ۟

ಅಲ್ಲಾಹು ಸತ್ಯದೊಂದಿಗೆ ಗ್ರಂಥವನ್ನು ಅವತೀರ್ಣಗೊಳಿಸಿದ್ದಾನೆ ಮತ್ತು ತಕ್ಕಡಿಯನ್ನು (ಕೂಡ ಇಳಿಸಿಕೊಟ್ಟಿದ್ದಾನೆ). ನಿಮಗೇನು ಗೊತ್ತು? ಅಂತ್ಯಸಮಯವು ಸಮೀಪದಲ್ಲೇ ಇರಬಹುದು. info
التفاسير:

external-link copy
18 : 42

یَسْتَعْجِلُ بِهَا الَّذِیْنَ لَا یُؤْمِنُوْنَ بِهَا ۚ— وَالَّذِیْنَ اٰمَنُوْا مُشْفِقُوْنَ مِنْهَا ۙ— وَیَعْلَمُوْنَ اَنَّهَا الْحَقُّ ؕ— اَلَاۤ اِنَّ الَّذِیْنَ یُمَارُوْنَ فِی السَّاعَةِ لَفِیْ ضَلٰلٍۢ بَعِیْدٍ ۟

ಅದರಲ್ಲಿ ವಿಶ್ವಾಸವಿಡದವರು ಅದಕ್ಕಾಗಿ (ಅಂತ್ಯಸಮಯಕ್ಕಾಗಿ) ಆತುರಪಡುತ್ತಾರೆ. ಆದರೆ ಸತ್ಯವಿಶ್ವಾಸಿಗಳು ಅದರ ಬಗ್ಗೆ ಭಯಭೀತರಾಗಿದ್ದಾರೆ. ಅವರು ಅದು ಸತ್ಯವೆಂದು ತಿಳಿದಿದ್ದಾರೆ. ತಿಳಿಯಿರಿ! ನಿಶ್ಚಯವಾಗಿಯೂ ಅಂತ್ಯಸಮಯದ ವಿಷಯದಲ್ಲಿ ತರ್ಕಿಸುವವರು ಯಾರೋ ಅವರು ವಿದೂರ ದುರ್ಮಾರ್ಗದಲ್ಲಿದ್ದಾರೆ. info
التفاسير:

external-link copy
19 : 42

اَللّٰهُ لَطِیْفٌ بِعِبَادِهٖ یَرْزُقُ مَنْ یَّشَآءُ ۚ— وَهُوَ الْقَوِیُّ الْعَزِیْزُ ۟۠

ಅಲ್ಲಾಹು ಅವನ ದಾಸರ ಮೇಲೆ ದಯೆಯನ್ನು ಹೊಂದಿದ್ದಾನೆ. ಅವನು ಇಚ್ಛಿಸುವವರಿಗೆ ಅವನು ಉಪಜೀವನವನ್ನು ಒದಗಿಸುತ್ತಾನೆ. ಅವನು ಮಹಾ ಶಕ್ತಿಶಾಲಿ ಮತ್ತು ಪ್ರಬಲನಾಗಿದ್ದಾನೆ. info
التفاسير:

external-link copy
20 : 42

مَنْ كَانَ یُرِیْدُ حَرْثَ الْاٰخِرَةِ نَزِدْ لَهٗ فِیْ حَرْثِهٖ ۚ— وَمَنْ كَانَ یُرِیْدُ حَرْثَ الدُّنْیَا نُؤْتِهٖ مِنْهَا ۙ— وَمَا لَهٗ فِی الْاٰخِرَةِ مِنْ نَّصِیْبٍ ۟

ಯಾರು ಪರಲೋಕದ ಬೆಳೆಯನ್ನು ಬಯಸುತ್ತಾನೋ ಅವನ ಬೆಳೆಯಲ್ಲಿ ನಾವು ಅಭಿವೃದ್ಧಿಯನ್ನು ನೀಡುವೆವು. ಯಾರು ಇಹಲೋಕದ ಬೆಳೆಯನ್ನು ಬಯಸುತ್ತಾನೋ ಅವನಿಗೆ ನಾವು ಇಹಲೋಕದಿಂದ ನೀಡುವೆವು. ಪರಲೋಕದಲ್ಲಿ ಅವನಿಗೆ ಯಾವುದೇ ಪಾಲು ಇರುವುದಿಲ್ಲ. info
التفاسير:

external-link copy
21 : 42

اَمْ لَهُمْ شُرَكٰٓؤُا شَرَعُوْا لَهُمْ مِّنَ الدِّیْنِ مَا لَمْ یَاْذَنْ بِهِ اللّٰهُ ؕ— وَلَوْلَا كَلِمَةُ الْفَصْلِ لَقُضِیَ بَیْنَهُمْ ؕ— وَاِنَّ الظّٰلِمِیْنَ لَهُمْ عَذَابٌ اَلِیْمٌ ۟

ಅಲ್ಲಾಹು ಆಜ್ಞಾಪಿಸದ ವಿಷಯಗಳನ್ನು ಅವರಿಗೆ ಧರ್ಮವನ್ನಾಗಿ ಮಾಡಿಕೊಟ್ಟ ಯಾರಾದರೂ ದೇವ-ಸಹಭಾಗಿಗಳು ಅವರಿಗಿದ್ದಾರೆಯೇ? ತೀರ್ಪು ನೀಡುವ ದಿನದ ಕುರಿತಾದ ವಾಗ್ದಾನವು ಇಲ್ಲದಿರುತ್ತಿದ್ದರೆ ಅವರ ನಡುವೆ ಈಗಾಗಲೇ ತೀರ್ಪು ನೀಡಲಾಗುತ್ತಿತ್ತು. ನಿಶ್ಚಯವಾಗಿಯೂ ಅಕ್ರಮಿಗಳಿಗೆ ಯಾತನಾಮಯ ಶಿಕ್ಷೆಯಿದೆ. info
التفاسير:

external-link copy
22 : 42

تَرَی الظّٰلِمِیْنَ مُشْفِقِیْنَ مِمَّا كَسَبُوْا وَهُوَ وَاقِعٌ بِهِمْ ؕ— وَالَّذِیْنَ اٰمَنُوْا وَعَمِلُوا الصّٰلِحٰتِ فِیْ رَوْضٰتِ الْجَنّٰتِ ۚ— لَهُمْ مَّا یَشَآءُوْنَ عِنْدَ رَبِّهِمْ ؕ— ذٰلِكَ هُوَ الْفَضْلُ الْكَبِیْرُ ۟

ಆ ಅಕ್ರಮಿಗಳು (ಪರಲೋಕದಲ್ಲಿ) ಅವರ ಕರ್ಮಗಳ ಬಗ್ಗೆ ಭಯಪಡುವುದನ್ನು ನೀವು ನೋಡುವಿರಿ. ಅದರ ದುಷ್ಫಲವು ಅವರ ಮೇಲೆ ಸಂಭವಿಸಿಯೇ ತೀರುತ್ತದೆ. ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಸ್ವರ್ಗದ ಉದ್ಯಾನಗಳಲ್ಲಿರುವರು. ಅವರು ಇಚ್ಛಿಸುವುದೆಲ್ಲವೂ ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಇರುವುದು. ಅದೇ ಮಹಾ ಔದಾರ್ಯ. info
التفاسير: