ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

លេខ​ទំព័រ:close

external-link copy
31 : 78

اِنَّ لِلْمُتَّقِیْنَ مَفَازًا ۟ۙ

ನಿಶ್ಚಯವಾಗಿಯೂ ದೇವಭಯವುಳ್ಳವರಿಗೆ ವಿಜಯವಿದೆ. info
التفاسير:

external-link copy
32 : 78

حَدَآىِٕقَ وَاَعْنَابًا ۟ۙ

ತೋಟಗಳು ಮತ್ತು ದ್ರಾಕ್ಷಿಗಳಿವೆ. info
التفاسير:

external-link copy
33 : 78

وَّكَوَاعِبَ اَتْرَابًا ۟ۙ

ಸಮಪ್ರಾಯದ ಯುವ ತರುಣಿಯರಿದ್ದಾರೆ. info
التفاسير:

external-link copy
34 : 78

وَّكَاْسًا دِهَاقًا ۟ؕ

ತುಂಬಿ ತುಳುಕುವ ಲೋಟಗಳಿವೆ. info
التفاسير:

external-link copy
35 : 78

لَا یَسْمَعُوْنَ فِیْهَا لَغْوًا وَّلَا كِذّٰبًا ۟ۚۖ

ಅವರು ಅಲ್ಲಿ ಅನಗತ್ಯ ಮಾತುಗಳನ್ನು ಅಥವಾ ಸುಳ್ಳು ವಾರ್ತೆಗಳನ್ನು ಕೇಳುವುದಿಲ್ಲ. info
التفاسير:

external-link copy
36 : 78

جَزَآءً مِّنْ رَّبِّكَ عَطَآءً حِسَابًا ۟ۙ

ಇವೆಲ್ಲವೂ ಅವರಿಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ದೊರೆಯುವ ಪರ್ಯಾಪ್ತ ಪ್ರತಿಫಲವಾಗಿದೆ. info
التفاسير:

external-link copy
37 : 78

رَّبِّ السَّمٰوٰتِ وَالْاَرْضِ وَمَا بَیْنَهُمَا الرَّحْمٰنِ لَا یَمْلِكُوْنَ مِنْهُ خِطَابًا ۟ۚ

ಅವನು ಯಾರೆಂದರೆ ಭೂಮ್ಯಾಕಾಶಗಳ ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳ ಪರಿಪಾಲಕ. ಅವನು ಪರಮ ದಯಾಳುವಾಗಿದ್ದಾನೆ. ಅವನೊಡನೆ ಮಾತನಾಡುವ ಅಧಿಕಾರ ಯಾರಿಗೂ ಇಲ್ಲ. info
التفاسير:

external-link copy
38 : 78

یَوْمَ یَقُوْمُ الرُّوْحُ وَالْمَلٰٓىِٕكَةُ صَفًّا ۙۗؕ— لَّا یَتَكَلَّمُوْنَ اِلَّا مَنْ اَذِنَ لَهُ الرَّحْمٰنُ وَقَالَ صَوَابًا ۟

ರೂಹ್ (ಜಿಬ್ರೀಲ್) ಮತ್ತು ದೇವದೂತರು‍ಗಳು ಸಾಲು ಸಾಲಾಗಿ ನಿಲ್ಲುವ ದಿನ. (ಅಂದು) ಪರಮ ದಯಾಳುವಾದ ಅಲ್ಲಾಹು ಯಾರಿಗೆ ಅನುಮತಿ ನೀಡುತ್ತಾನೋ ಮತ್ತು ಯಾರು ಸರಿಯಾದ ಮಾತನ್ನೇ ಆಡುತ್ತಾರೋ ಅವರ ಹೊರತು ಬೇರೆ ಯಾರಿಗೂ ತುಟಿ ಬಿಚ್ಚಲಾಗುವುದಿಲ್ಲ. info
التفاسير:

external-link copy
39 : 78

ذٰلِكَ الْیَوْمُ الْحَقُّ ۚ— فَمَنْ شَآءَ اتَّخَذَ اِلٰی رَبِّهٖ مَاٰبًا ۟

ಆ ದಿನವು ಸತ್ಯವಾಗಿದೆ. ಆದ್ದರಿಂದ ಇಚ್ಛೆಯುಳ್ಳವನು (ಸತ್ಕರ್ಮಗಳನ್ನು ಮಾಡಿ) ತನ್ನ ಪರಿಪಾಲಕನ (ಅಲ್ಲಾಹನ) ಬಳಿ ವಾಸಸ್ಥಳವನ್ನು ಸ್ವೀಕರಿಸಿಕೊಳ್ಳಲಿ. info
التفاسير:

external-link copy
40 : 78

اِنَّاۤ اَنْذَرْنٰكُمْ عَذَابًا قَرِیْبًا ۖۚ۬— یَّوْمَ یَنْظُرُ الْمَرْءُ مَا قَدَّمَتْ یَدٰهُ وَیَقُوْلُ الْكٰفِرُ یٰلَیْتَنِیْ كُنْتُ تُرٰبًا ۟۠

ನಾವು ನಿಮಗೆ ಶೀಘ್ರದಲ್ಲೇ ಬರುವ ಒಂದು ಶಿಕ್ಷೆಯ ಬಗ್ಗೆ ನಿಶ್ಚಯವಾಗಿಯೂ ಮುನ್ನೆಚ್ಚರಿಕೆ ನೀಡಿದ್ದೇವೆ. ಅಂದು ಮನುಷ್ಯನು ತನ್ನ ಕೈಗಳು ಮುಂದಕ್ಕೆ ಕಳುಹಿಸಿದ ಕರ್ಮಗಳನ್ನು ನೋಡುವನು ಮತ್ತು ಸತ್ಯನಿಷೇಧಿಯು ಹೇಳುವನು: “ಅಯ್ಯೋ! ನಾನು ಮಣ್ಣಾಗಿ ಬಿಟ್ಟಿದ್ದರೆ ಎಷ್ಟು ಚೆನ್ನಾಗಿತ್ತು!” info
التفاسير: