ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
28 : 9

یٰۤاَیُّهَا الَّذِیْنَ اٰمَنُوْۤا اِنَّمَا الْمُشْرِكُوْنَ نَجَسٌ فَلَا یَقْرَبُوا الْمَسْجِدَ الْحَرَامَ بَعْدَ عَامِهِمْ هٰذَا ۚ— وَاِنْ خِفْتُمْ عَیْلَةً فَسَوْفَ یُغْنِیْكُمُ اللّٰهُ مِنْ فَضْلِهٖۤ اِنْ شَآءَ ؕ— اِنَّ اللّٰهَ عَلِیْمٌ حَكِیْمٌ ۟

ಓ ಸತ್ಯವಿಶ್ವಾಸಿಗಳೇ! ನಿಶ್ಚಯವಾಗಿಯೂ ಬಹುದೇವವಿಶ್ವಾಸಿಗಳು ಅಶುದ್ಧರಾಗಿದ್ದಾರೆ.[1] ಆದ್ದರಿಂದ ಈ ವರ್ಷದ ಬಳಿಕ ಅವರು ಪವಿತ್ರ ಮಸೀದಿಯ ಸಮೀಪಕ್ಕೂ ಬರದಿರಲಿ. ನಿಮಗೆ ಬಡತನದ ಬಗ್ಗೆ ಆತಂಕವಿದ್ದರೆ, ಅಲ್ಲಾಹು ಇಚ್ಛಿಸಿದರೆ ಸದ್ಯವೇ ಅವನು ತನ್ನ ಔದಾರ್ಯದಿಂದ ನಿಮ್ಮನ್ನು ಧನಿಕರನ್ನಾಗಿ ಮಾಡುವನು.[2] ನಿಶ್ಚಯವಾಗಿಯೂ ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ. info

[1] ಅಶುದ್ಧರು ಎಂದರೆ ದೈಹಿಕವಾಗಿ ಅಶುದ್ಧರು ಎಂದಲ್ಲ. ಬದಲಿಗೆ, ಅವರ ನಂಬಿಕೆಗಳು ಮತ್ತು ಕರ್ಮಗಳು ಅಶುದ್ಧವಾಗಿವೆ ಎಂದರ್ಥ.
[2] ಬಹುದೇವವಿಶ್ವಾಸಿಗಳು ಹಜ್ಜ್ ನಿರ್ವಹಿಸಲು ಮಕ್ಕಾಗೆ ಬರದಿದ್ದರೆ ತಮ್ಮ ವ್ಯಾಪಾರಕ್ಕೆ ಕುಂದುಂಟಾಗಬಹುದೆಂದು ಕೆಲವು ಮುಸ್ಲಿಮರು ಆತಂಕಗೊಂಡಿದ್ದರು.

التفاسير: