ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ

external-link copy
153 : 4

یَسْـَٔلُكَ اَهْلُ الْكِتٰبِ اَنْ تُنَزِّلَ عَلَیْهِمْ كِتٰبًا مِّنَ السَّمَآءِ فَقَدْ سَاَلُوْا مُوْسٰۤی اَكْبَرَ مِنْ ذٰلِكَ فَقَالُوْۤا اَرِنَا اللّٰهَ جَهْرَةً فَاَخَذَتْهُمُ الصّٰعِقَةُ بِظُلْمِهِمْ ۚ— ثُمَّ اتَّخَذُوا الْعِجْلَ مِنْ بَعْدِ مَا جَآءَتْهُمُ الْبَیِّنٰتُ فَعَفَوْنَا عَنْ ذٰلِكَ ۚ— وَاٰتَیْنَا مُوْسٰی سُلْطٰنًا مُّبِیْنًا ۟

ನೀವು (ಪೈಗಂಬರರೇ) ಅವರ ಬಳಿ ಯಾವುದಾದರೊಂದು ಗ್ರಂಥವನ್ನು ಆಕಾಶದಿಂದ ಇಳಿಸಿಕೊಡಬೇಕೆಂದು ಗ್ರಂಥದವರು ನಿಮ್ಮೊಂದಿಗೆ ಕೇಳುತ್ತಾರೆ. ಇದಕ್ಕಿಂತಲೂ ಘೋರವಾದುದನ್ನು ಅವರು ಮೂಸಾರೊಂದಿಗೆ ಕೇಳಿದ್ದರು: ಅಂದರೆ ನಮಗೆ ಅಲ್ಲಾಹನನ್ನು ಪ್ರತ್ಯಕ್ಷವಾಗಿ ತೋರಿಸಿಕೊಡಿರಿ. ಆಗ ಅವರ ಅಕ್ರಮದ ನಿಮಿತ್ತ ಅವರನ್ನು ಸಿಡಿಲು ಬಡಿದು ಬಿಟ್ಟಿತು. ನಂತರ ಸ್ಪಷ್ಟವಾದ ಪುರಾವೆಗಳು ಬಂದು ತಲುಪಿದ ಬಳಿಕವೂ ಅವರು ಕರುವನ್ನು ತಮ್ಮ ಆರಾಧ್ಯನÀನ್ನಾಗಿ ಮಾಡಿಕೊಂಡರು. ಆದರೆ ನಾವದನ್ನೂ ಕ್ಷಮಿಸಿಬಿಟ್ಟೆವು. ಪೈಗಂಬರ್ ಮೂಸಾರಿಗೆ ನಾವು ಸ್ಪಷ್ಟವಾದ ವಿಜಯವನ್ನು ನೀಡಿದೆವು. info
التفاسير: