[1] ಯಹೂದಿಗಳು ಉಝೈರ್ರನ್ನು ಮತ್ತು ಕ್ರೈಸ್ತರು ಈಸಾರನ್ನು ಅಲ್ಲಾಹನ ಮಗನೆಂದು ಕರೆಯುತ್ತಿದ್ದರು. ಅಷ್ಟೇ ಅಲ್ಲದೆ, ಸ್ವತಃ ತಮ್ಮನ್ನು ದೇವರ ಮಕ್ಕಳು ಮತ್ತು ದೇವರ ಪ್ರೀತಿಪಾತ್ರರೆಂದು ಅಹಂಭಾವದಿಂದ ಹೇಳುತ್ತಿದ್ದರು.
[1] ಯೂಸುಫರು (ಅವರ ಮೇಲೆ ಶಾಂತಿಯಿರಲಿ) ಈಜಿಪ್ಟಿನಲ್ಲಿ ರಾಜನಾದಾಗ ಇಸ್ರಾಯೇಲ್ ಮಕ್ಕಳು ಅಲ್ಲಿಗೆ ತೆರಳಿ ಅಲ್ಲಿ ವಾಸಿಸತೊಡಗಿದರು. ನಂತರ ಈಜಿಪ್ಟನ್ನು ಆಳಿದ ಫರೋಹಗಳ ಕೈಯಲ್ಲಿ ಅವರು ಕ್ರೂರ ಹಿಂಸೆಯನ್ನು ಮತ್ತು ಗುಲಾಮಗಿರಿಯನ್ನು ಅನುಭವಿಸಬೇಕಾಗಿ ಬಂತು. ಪವಿತ್ರ ಭೂಮಿಯಲ್ಲಿ (ಪ್ಯಾಲಸ್ತೀನ್ನಲ್ಲಿ) ಅವರನ್ನು ವಾಸ ಮಾಡಿಸುವೆನೆಂದು ಅಲ್ಲಾಹು ಅವರಿಗೆ ಪ್ರವಾದಿಗಳ ಮೂಲಕ ವಾಗ್ದಾನ ಮಾಡಿದ್ದನು. ಆದರೆ ಅವರು ವೀರಾವೇಶದಿಂದ ಯುದ್ಧ ಮಾಡಿ ಆ ಭೂಮಿಯನ್ನು ಗೆಲ್ಲಬೇಕಾಗಿತ್ತು. ಆದರೆ ಇಸ್ರಾಯೇಲರು ಯುದ್ಧ ಮಾಡಲು ಹಿಂಜರಿದರು. ಅವರ ಅವಿಧೇಯತೆಯಿಂದಾಗಿ ಅಲ್ಲಾಹು ಅವರಿಗೆ ನಲ್ವತ್ತು ವರ್ಷಗಳ ಕಾಲ ಸೀನಾ ಮರುಭೂಮಿಯಲ್ಲಿ ಅಲೆಯುವ ಶಿಕ್ಷೆಯನ್ನು ನೀಡಿದನು. ಈ ಮಧ್ಯೆ ಮೂಸಾ ಮತ್ತು ಹಾರೂನ್ (ಅವರ ಮೇಲೆ ಶಾಂತಿಯಿರಲಿ) ನಿಧನರಾದರು. ನಂತರ ಯೂಶಅ್ ರ (ಅವರ ಮೇಲೆ ಶಾಂತಿಯಿರಲಿ) ಕಾಲದಲ್ಲಿ ಅವರಿಗೆ ಪವಿತ್ರ ಭೂಮಿಯಲ್ಲಿ ವಾಸ ಮಾಡಲು ಸಾಧ್ಯವಾಯಿತು.