ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು

ಪುಟ ಸಂಖ್ಯೆ:close

external-link copy
32 : 5

مِنْ اَجْلِ ذٰلِكَ ؔۛۚ— كَتَبْنَا عَلٰی بَنِیْۤ اِسْرَآءِیْلَ اَنَّهٗ مَنْ قَتَلَ نَفْسًا بِغَیْرِ نَفْسٍ اَوْ فَسَادٍ فِی الْاَرْضِ فَكَاَنَّمَا قَتَلَ النَّاسَ جَمِیْعًا ؕ— وَمَنْ اَحْیَاهَا فَكَاَنَّمَاۤ اَحْیَا النَّاسَ جَمِیْعًا ؕ— وَلَقَدْ جَآءَتْهُمْ رُسُلُنَا بِالْبَیِّنٰتِ ؗ— ثُمَّ اِنَّ كَثِیْرًا مِّنْهُمْ بَعْدَ ذٰلِكَ فِی الْاَرْضِ لَمُسْرِفُوْنَ ۟

ಇದೇ ಕಾರಣದಿಂದ, ನಾವು ಇಸ್ರಾಯೇಲ್ ಮಕ್ಕಳಿಗೆ ಹೀಗೆ ವಿಧಿಸಿದೆವು: ಕೊಲೆಗೆ ಪ್ರತೀಕಾರವಾಗಿ ಅಥವಾ ಭೂಮಿಯಲ್ಲಿ ಕಿಡಿಗೇಡಿತನ ಮಾಡಿದ್ದಕ್ಕಾಗಿ ಹೊರತು ಒಬ್ಬ ವ್ಯಕ್ತಿಯನ್ನು ಯಾರಾದರೂ ಕೊಂದರೆ ಅದು ಸಂಪೂರ್ಣ ಮನುಕುಲವನ್ನು ಕೊಲ್ಲುವುದಕ್ಕೆ ಸಮಾನವಾಗಿದೆ ಮತ್ತು ಒಬ್ಬ ವ್ಯಕ್ತಿಯ ಜೀವವನ್ನು ಯಾರಾದರೂ ಉಳಿಸಿದರೆ ಅದು ಸಂಪೂರ್ಣ ಮನುಕುಲದ ಜೀವವನ್ನು ಉಳಿಸಿದ್ದಕ್ಕೆ ಸಮಾನವಾಗಿದೆ. ನಮ್ಮ ಸಂದೇಶವಾಹಕರು ಈಗಾಗಲೇ ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದಿದ್ದಾರೆ. ನಂತರ ಆ ಬಳಿಕವೂ ಅವರಲ್ಲಿ ಅನೇಕ ಮಂದಿ ಭೂಮಿಯಲ್ಲಿ ಅತಿರೇಕವೆಸಗುತ್ತಲೇ ಇದ್ದಾರೆ. info
التفاسير:

external-link copy
33 : 5

اِنَّمَا جَزٰٓؤُا الَّذِیْنَ یُحَارِبُوْنَ اللّٰهَ وَرَسُوْلَهٗ وَیَسْعَوْنَ فِی الْاَرْضِ فَسَادًا اَنْ یُّقَتَّلُوْۤا اَوْ یُصَلَّبُوْۤا اَوْ تُقَطَّعَ اَیْدِیْهِمْ وَاَرْجُلُهُمْ مِّنْ خِلَافٍ اَوْ یُنْفَوْا مِنَ الْاَرْضِ ؕ— ذٰلِكَ لَهُمْ خِزْیٌ فِی الدُّنْیَا وَلَهُمْ فِی الْاٰخِرَةِ عَذَابٌ عَظِیْمٌ ۟ۙ

ಅಲ್ಲಾಹು ಮತ್ತು ಅವನ ಸಂದೇಶವಾಹಕರ ವಿರುದ್ಧ ಹೋರಾಡುವವರು ಮತ್ತು ಭೂಮಿಯಲ್ಲಿ ಕಿಡಿಗೇಡಿತನ ಮಾಡಲು ಯತ್ನಿಸುವವರು ಯಾರೋ—ಅವರಿಗೆ ನೀಡಲಾಗುವ ಪ್ರತಿಫಲವು ಅವರನ್ನು ಸಾಯಿಸುವುದು, ಅಥವಾ ಶಿಲುಬೆಗೇರಿಸುವುದು, ಅಥವಾ ಅವರ ಕೈಕಾಲುಗಳನ್ನು ವಿರುದ್ಧ ದಿಕ್ಕಿನಿಂದ ಕತ್ತರಿಸುವುದು ಅಥವಾ ಅವರನ್ನು ಗಡಿಪಾರು ಮಾಡುವುದು ಮಾತ್ರವಾಗಿದೆ. ಅದು ಅವರಿಗೆ ಇಹಲೋಕದಲ್ಲಿರುವ ಅಪಮಾನವಾಗಿದೆ. ಪರಲೋಕದಲ್ಲಿ ಅವರಿಗೆ ಕಠೋರ ಶಿಕ್ಷೆಯಿದೆ. info
التفاسير:

external-link copy
34 : 5

اِلَّا الَّذِیْنَ تَابُوْا مِنْ قَبْلِ اَنْ تَقْدِرُوْا عَلَیْهِمْ ۚ— فَاعْلَمُوْۤا اَنَّ اللّٰهَ غَفُوْرٌ رَّحِیْمٌ ۟۠

ಆದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲು ನಿಮಗೆ ಸಾಧ್ಯವಾಗುವುದಕ್ಕೆ ಮೊದಲು ಪಶ್ಚಾತ್ತಾಪಪಟ್ಟು ಮರಳಿದವರು ಇದರಿಂದ ಹೊರತಾಗಿದ್ದಾರೆ. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. info
التفاسير:

external-link copy
35 : 5

یٰۤاَیُّهَا الَّذِیْنَ اٰمَنُوا اتَّقُوا اللّٰهَ وَابْتَغُوْۤا اِلَیْهِ الْوَسِیْلَةَ وَجَاهِدُوْا فِیْ سَبِیْلِهٖ لَعَلَّكُمْ تُفْلِحُوْنَ ۟

ಓ ಸತ್ಯವಿಶ್ವಾಸಿಗಳೇ! ಅಲ್ಲಾಹನನ್ನು ಭಯಪಡಿರಿ ಮತ್ತು ಅವನಿಗೆ ಸಮೀಪಗೊಳಿಸುವ ವಸೀಲ (ಮಾಧ್ಯಮ)ವನ್ನು ಹುಡುಕಿರಿ;[1] ಮತ್ತು ಅವನ ಮಾರ್ಗದಲ್ಲಿ ಹೋರಾಡಿರಿ. ನೀವು ಯಶಸ್ವಿಯಾಗುವುದಕ್ಕಾಗಿ. info

[1] ವಸೀಲ ಎಂದರೆ ಗುರಿ ಸಾಧನೆಗಿರುವ ಮಾಧ್ಯಮ; ಅಥವಾ ಗುರಿಯ ಕಡೆಗೆ ಹತ್ತಿರಗೊಳಿಸುವ ಮಾಧ್ಯಮ. ಅಲ್ಲಾಹನಿಗೆ ಹತ್ತಿರಗೊಳಿಸುವ ಮಾಧ್ಯಮ ಎಂದರೆ ಅಲ್ಲಾಹು ಆದೇಶಿಸಿದ ಕಾರ್ಯಗಳನ್ನು ಮಾಡುವುದು ಮತ್ತು ಅವನು ವಿರೋಧಿಸಿದ ಕಾರ್ಯಗಳಿಂದ ದೂರವಿರುವುದು.

التفاسير:

external-link copy
36 : 5

اِنَّ الَّذِیْنَ كَفَرُوْا لَوْ اَنَّ لَهُمْ مَّا فِی الْاَرْضِ جَمِیْعًا وَّمِثْلَهٗ مَعَهٗ لِیَفْتَدُوْا بِهٖ مِنْ عَذَابِ یَوْمِ الْقِیٰمَةِ مَا تُقُبِّلَ مِنْهُمْ ۚ— وَلَهُمْ عَذَابٌ اَلِیْمٌ ۟

ನಿಶ್ಚಯವಾಗಿಯೂ ಸತ್ಯನಿಷೇಧಿಗಳ ಬಳಿ ಭೂಮಿಯಲ್ಲಿರುವ ಎಲ್ಲಾ ವಸ್ತುಗಳೂ ಮತ್ತು ಅದರಷ್ಟೇ ಬೇರೆಯೂ ಇದ್ದು, ಪುನರುತ್ಥಾನ ದಿನದ ಶಿಕ್ಷೆಯಿಂದ ಪಾರಾಗಲು ಅವರು ಅದನ್ನು ಪರಿಹಾರವಾಗಿ ನೀಡಿದರೆ, ಅವರಿಂದ ಅದನ್ನು ಸ್ವೀಕರಿಸಲಾಗುವುದಿಲ್ಲ. ಅವರಿಗೆ ಯಾತನಾಮಯ ಶಿಕ್ಷೆಯಿದೆ. info
التفاسير: