[1] ಸ್ಫುರದ್ರೂಪಿಗಳು ಮತ್ತು ಉತ್ತಮ ದೇಹದಾರ್ಢ್ಯವನ್ನು ಹೊಂದಿರುವ ತನ್ನ ಹನ್ನೊಂದು ಮಕ್ಕಳು ಒಟ್ಟೊಟ್ಟಿಗೆ ಪ್ರವೇಶ ಮಾಡುವಾಗ ಜನರು ಅವರನ್ನು ಕಂಡು ಬೆರಗಾಗುವರು ಮತ್ತು ಅಸೂಯೆಪಡುವರು. ಇದರಿಂದ ಅವರಿಗೆ ದೃಷ್ಟಿ ತಾಗುವ ಸಾಧ್ಯತೆಯಿದೆ. ಜನರ ದೃಷ್ಟಿಯಿಂದ ಅವರನ್ನು ಕಾಪಾಡಲು ಯಾಕೂಬ್ (ಅವರ ಮೇಲೆ ಶಾಂತಿಯಿರಲಿ) ಈ ಉಪಾಯವನ್ನು ಹೇಳಿದ್ದರು. ಆದರೆ ಇದರ ಹೊರತಾಗಿಯೂ ದೃಷ್ಟಿ ತಾಗಬೇಕೆಂದು ಅಲ್ಲಾಹನ ವಿಧಿಸಿದ್ದರೆ ಅದನ್ನು ತಡೆಗಟ್ಟಲು ಯಾರಿಗೂ ಸಾಧ್ಯವಿಲ್ಲ. ಇದು ಕೇವಲ ಒಂದು ಮುಂಜಾಗೃತಾ ಕ್ರಮ ಮಾತ್ರವಾಗಿದೆ.