വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
5 : 17

فَاِذَا جَآءَ وَعْدُ اُوْلٰىهُمَا بَعَثْنَا عَلَیْكُمْ عِبَادًا لَّنَاۤ اُولِیْ بَاْسٍ شَدِیْدٍ فَجَاسُوْا خِلٰلَ الدِّیَارِ وَكَانَ وَعْدًا مَّفْعُوْلًا ۟

ಆ ಎರಡು ವಾಗ್ದಾನಗಳಲ್ಲಿ ಮೊದಲನೆಯ ವಾಗ್ದಾನದ ಸಮಯವು ಬಂದಾಗ, ನಾವು ನಿಮ್ಮ ವಿರುದ್ಧ ಮಹಾಶೂರರಾದ ನಮ್ಮ ದಾಸರನ್ನು ಕಳುಹಿಸಿದೆವು. ಅವರು ನಿಮ್ಮನ್ನು ಮನೆ ಮನೆಗಳಲ್ಲಿ ಹುಡುಕಿದರು. ಅಲ್ಲಾಹನ ಈ ವಾಗ್ದಾನವು ನೆರವೇರುವಂತದ್ದೇ ಆಗಿದೆ.[1] info

[1] ಕ್ರಿ.ಪೂ. 600 ರಲ್ಲಿ ಬಾಬಿಲೋನಿಯಾದ ಚಕ್ರವರ್ತಿ ಬುಖ್ತ್ ನಸರ್ (ನೆಬೂಕಡ್‌ನಝರ್) ಜೆರೂಸಲೇಂ ಮೇಲೆ ದಾಳಿ ಮಾಡಿ ಅಸಂಖ್ಯ ಯಹೂದಿಗಳನ್ನು ಕೊಂದು ಅಸಂಖ್ಯ ಜನರನ್ನು ಗುಲಾಮರನ್ನಾಗಿ ಮಾಡಿಕೊಂಡ ಕಡೆಗೆ ಇಲ್ಲಿ ಸೂಚನೆ ನೀಡಲಾಗಿದೆ. ಇದು ಯಹೂದಿಗಳು ಅಲ್ಲಾಹನ ಪ್ರವಾದಿಗಳನ್ನು ಕೊಂದು ತೌರಾತನ್ನು ಬಹಿರಂಗವಾಗಿ ಉಲ್ಲಂಘಿಸಿ ವಿಕೃತಿ ಮೆರೆದ ಸಂದರ್ಭದಲ್ಲಾಗಿತ್ತು. ಬುಖ್ತ್ ನಸರ್ ಮಾತ್ರವಲ್ಲದೆ, ಜಾಲೂತ್ (ಗೋಲಿಯತ್) ನ ಕೈಯಲ್ಲೂ ಕೂಡ ಯಹೂದಿಗಳು ಬಗೆ ಬಗೆಯ ಹಿಂಸೆಗಳನ್ನು ಅನುಭವಿಸಿದ್ದರು. ನಂತರ ತಾಲೂತ್ (ಸೌಲ್) ರ ಕಾಲದಲ್ಲಿ ಪ್ರವಾದಿ ದಾವೂದ್ (ಅವರ ಮೇಲೆ ಶಾಂತಿಯಿರಲಿ) ಜಾಲೂತನನ್ನು ಜೆರೂಸಲೇಂ ಅನ್ನು ವಶಪಡಿಸಿದರು.

التفاسير: