पवित्र कुरअानको अर्थको अनुवाद - कन्नड अनुवाद : हमजा बेतुर ।

رقم الصفحة:close

external-link copy
9 : 6

وَلَوْ جَعَلْنٰهُ مَلَكًا لَّجَعَلْنٰهُ رَجُلًا وَّلَلَبَسْنَا عَلَیْهِمْ مَّا یَلْبِسُوْنَ ۟

ನಾವು ದೇವದೂತರನ್ನು ಪ್ರವಾದಿಯಾಗಿ ಕಳುಹಿಸುತ್ತಿದ್ದರೂ ಸಹ ಅವರನ್ನು ಮನುಷ್ಯನಾಗಿ ಮಾಡಿಯೇ ಕಳುಹಿಸುತ್ತಿದ್ದೆವು. ಅವರು ಈಗ ಏನು ಗೊಂದಲ ಮಾಡುತ್ತಿದ್ದಾರೋ ಅದೇ ಗೊಂದಲವನ್ನು ಅವರು ಆಗಲೂ ಮಾಡುತ್ತಿದ್ದರು.[1] info

[1] ಅಲ್ಲಾಹು ದೇವದೂತರನ್ನು ಪ್ರವಾದಿಯಾಗಿ ಕಳುಹಿಸುವುದು ಸಾಧ್ಯವಿಲ್ಲ. ಏಕೆಂದರೆ ದೇವದೂತರನ್ನು ಕಳುಹಿಸಿದರೆ ಜನರು ಹೇಳುತ್ತಿದ್ದರು: “ನೀನೇಕೆ ದೇವದೂತರನ್ನು ಪ್ರವಾದಿಯಾಗಿ ಕಳುಹಿಸಿದೆ? ನೀನು ಮನುಷ್ಯನನ್ನು ಪ್ರವಾದಿಯಾಗಿ ಕಳುಹಿಸುತ್ತಿದ್ದರೆ ನಾವು ಆ ಪ್ರವಾದಿಯನ್ನು ಅನುಸರಿಸುತ್ತಿದ್ದೆವು. ನಾವು ದೇವದೂತರನ್ನು ಅನುಸರಿಸುವುದು ಹೇಗೆ ಸಾಧ್ಯ? ಅವರಿಗೂ ನಮಗೂ ಅಗಾಧ ವ್ಯತ್ಯಾಸವಿದೆ.” ಇನ್ನು ದೇವದೂತರನ್ನು ಪ್ರವಾದಿಯಾಗಿ ಕಳುಹಿಸುವುದಾದರೂ ಅವರನ್ನು ಮನುಷ್ಯ ರೂಪದಲ್ಲೇ ಕಳುಹಿಸಬೇಕಾಗುತ್ತದೆ. ಆದರೆ ಆಗಲೂ ಅವರು ಈಗ ಹೇಳುತ್ತಿರುವ ಅದೇ ಕಾರಣವನ್ನು ಹೇಳಿ ಅನುಸರಿಸಲು ನಿರಾಕರಿಸುತ್ತಿದ್ದರು.

التفاسير:

external-link copy
10 : 6

وَلَقَدِ اسْتُهْزِئَ بِرُسُلٍ مِّنْ قَبْلِكَ فَحَاقَ بِالَّذِیْنَ سَخِرُوْا مِنْهُمْ مَّا كَانُوْا بِهٖ یَسْتَهْزِءُوْنَ ۟۠

ನಿಮಗಿಂತ ಮೊದಲು ಅನೇಕ ಸಂದೇಶವಾಹಕರು ಜನರಿಂದ ತಮಾಷೆಗೆ ಗುರಿಯಾಗಿದ್ದಾರೆ. ನಂತರ, ಅವರು ಏನು ತಮಾಷೆ ಮಾಡುತ್ತಿದ್ದರೋ ಅದೇ ಅವರನ್ನು ಆವರಿಸಿಕೊಂಡಿತು. info
التفاسير:

external-link copy
11 : 6

قُلْ سِیْرُوْا فِی الْاَرْضِ ثُمَّ اَنْظُرُوْا كَیْفَ كَانَ عَاقِبَةُ الْمُكَذِّبِیْنَ ۟

ಹೇಳಿರಿ: “ನೀವು ಭೂಮಿಯಲ್ಲಿ ಸಂಚರಿಸಿರಿ. ನಂತರ ಸತ್ಯನಿಷೇಧಿಗಳ ಅಂತ್ಯವು ಹೇಗಿತ್ತೆಂದು ನೋಡಿ.” info
التفاسير:

external-link copy
12 : 6

قُلْ لِّمَنْ مَّا فِی السَّمٰوٰتِ وَالْاَرْضِ ؕ— قُلْ لِّلّٰهِ ؕ— كَتَبَ عَلٰی نَفْسِهِ الرَّحْمَةَ ؕ— لَیَجْمَعَنَّكُمْ اِلٰی یَوْمِ الْقِیٰمَةِ لَا رَیْبَ فِیْهِ ؕ— اَلَّذِیْنَ خَسِرُوْۤا اَنْفُسَهُمْ فَهُمْ لَا یُؤْمِنُوْنَ ۟

ಕೇಳಿರಿ: “ಭೂಮ್ಯಾಕಾಶಗಳಲ್ಲಿರುವುದು ಯಾರಿಗೆ ಸೇರಿದ್ದು?” ಹೇಳಿರಿ: “ಅಲ್ಲಾಹನಿಗೆ ಸೇರಿದ್ದು.” ಅವನು ದಯೆ ತೋರುವುದನ್ನು ಸ್ವಯಂ ಕಡ್ಡಾಯಗೊಳಿಸಿದ್ದಾನೆ. ಪುನರುತ್ಥಾನದ ದಿನದಂದು ಅವನು ನಿಮ್ಮನ್ನು ಖಂಡಿತ ಒಟ್ಟುಗೂಡಿಸುವನು. ಅದರಲ್ಲಿ ಸಂಶಯವೇ ಇಲ್ಲ. ಸ್ವಯಂ ನಷ್ಟಹೊಂದಿದವರು ಯಾರೋ ಅವರು ವಿಶ್ವಾಸವಿಡುವುದಿಲ್ಲ. info
التفاسير:

external-link copy
13 : 6

وَلَهٗ مَا سَكَنَ فِی الَّیْلِ وَالنَّهَارِ ؕ— وَهُوَ السَّمِیْعُ الْعَلِیْمُ ۟

ರಾತ್ರಿ ಮತ್ತು ಹಗಲಿನಲ್ಲಿರುವುದೆಲ್ಲವೂ ಅವನಿಗೆ ಸೇರಿದ್ದು. ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ. info
التفاسير:

external-link copy
14 : 6

قُلْ اَغَیْرَ اللّٰهِ اَتَّخِذُ وَلِیًّا فَاطِرِ السَّمٰوٰتِ وَالْاَرْضِ وَهُوَ یُطْعِمُ وَلَا یُطْعَمُ ؕ— قُلْ اِنِّیْۤ اُمِرْتُ اَنْ اَكُوْنَ اَوَّلَ مَنْ اَسْلَمَ وَلَا تَكُوْنَنَّ مِنَ الْمُشْرِكِیْنَ ۟

ಹೇಳಿರಿ: “ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಅಲ್ಲಾಹನನ್ನು ಬಿಟ್ಟು ಬೇರೆಯವರನ್ನು ನಾನು ರಕ್ಷಕನಾಗಿ ಸ್ವೀಕರಿಸಬೇಕೇ? ಅವನು ಆಹಾರ ನೀಡುತ್ತಾನೆ. ಅವನಿಗೆ ಯಾರೂ ಆಹಾರವನ್ನು ನೀಡುವುದಿಲ್ಲ.” ಹೇಳಿರಿ: “ನಿಶ್ಚಯವಾಗಿಯೂ ಅಲ್ಲಾಹನಿಗೆ ಶರಣಾದವರಲ್ಲಿ ಮೊದಲಿಗನಾಗಬೇಕೆಂದು ನನಗೆ ಆಜ್ಞಾಪಿಸಲಾಗಿದೆ. ನೀವು ಎಂದಿಗೂ ಬಹುದೇವಾರಾಧಕರಲ್ಲಿ ಸೇರಬಾರದು (ಎಂದು ಕೂಡ ನನಗೆ ಆಜ್ಞಾಪಿಸಲಾಗಿದೆ).” info
التفاسير:

external-link copy
15 : 6

قُلْ اِنِّیْۤ اَخَافُ اِنْ عَصَیْتُ رَبِّیْ عَذَابَ یَوْمٍ عَظِیْمٍ ۟

ಹೇಳಿರಿ: “ನಾನು ನನ್ನ ಪರಿಪಾಲಕನಿಗೆ (ಅಲ್ಲಾಹನಿಗೆ) ಅವಿಧೇಯತೆ ತೋರಿದರೆ, ಒಂದು ಭಯಾನಕ ದಿನದ (ಪುನರುತ್ಥಾನ ದಿನದ) ಶಿಕ್ಷೆ (ನನ್ನ ಮೇಲೆರಗಬಹುದೆಂದು) ನಾನು ಭಯಪಡುತ್ತೇನೆ.” info
التفاسير:

external-link copy
16 : 6

مَنْ یُّصْرَفْ عَنْهُ یَوْمَىِٕذٍ فَقَدْ رَحِمَهٗ ؕ— وَذٰلِكَ الْفَوْزُ الْمُبِیْنُ ۟

ಆ ದಿನ ಯಾರು ಶಿಕ್ಷೆಯಿಂದ ಪಾರಾಗುತ್ತಾನೋ ಅವನಿಗೆ ಅಲ್ಲಾಹು ಖಂಡಿತ ದಯೆ ತೋರಿದ್ದಾನೆ. ಅದು ಸ್ಪಷ್ಟ ವಿಜಯವಾಗಿದೆ. info
التفاسير:

external-link copy
17 : 6

وَاِنْ یَّمْسَسْكَ اللّٰهُ بِضُرٍّ فَلَا كَاشِفَ لَهٗۤ اِلَّا هُوَ ؕ— وَاِنْ یَّمْسَسْكَ بِخَیْرٍ فَهُوَ عَلٰی كُلِّ شَیْءٍ قَدِیْرٌ ۟

ಅಲ್ಲಾಹು ನಿಮಗೇನಾದರೂ ತೊಂದರೆ ಕೊಟ್ಟರೆ, ಅದನ್ನು ನಿವಾರಿಸಲು ಅವನ ಹೊರತು ಯಾರಿಗೂ ಸಾಧ್ಯವಿಲ್ಲ. ಅವನು ನಿಮಗೇನಾದರೂ ಒಳಿತು ಮಾಡಿದರೆ, ಅವನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ. info
التفاسير:

external-link copy
18 : 6

وَهُوَ الْقَاهِرُ فَوْقَ عِبَادِهٖ ؕ— وَهُوَ الْحَكِیْمُ الْخَبِیْرُ ۟

ಅವನಿಗೆ ಅವರ ದಾಸರ ಮೇಲೆ ಪರಮಾಧಿಕಾರವಿದೆ. ಅವನು ವಿವೇಕಪೂರ್ಣನು ಮತ್ತು ಸೂಕ್ಷ್ಮಜ್ಞಾನಿಯಾಗಿದ್ದಾನೆ. info
التفاسير: