[1] ಒಮ್ಮೆ ಮೂಸಾರೊಡನೆ (ಅವರ ಮೇಲೆ ಶಾಂತಿಯಿರಲಿ) ಒಬ್ಬ ವ್ಯಕ್ತಿ ಪ್ರಶ್ನೆ ಕೇಳಿದಾಗ ಮೂಸಾ (ಅವರ ಮೇಲೆ ಶಾಂತಿಯಿರಲಿ) ಹೇಳಿದರು: “ಈಗ ಜಗತ್ತಿನಲ್ಲಿ ನನಗಿಂತಲೂ ಹೆಚ್ಚು ಜ್ಞಾನವಿರುವವರು ಯಾರೂ ಇಲ್ಲ.” ಅವರ ಈ ಮಾತು ಅಲ್ಲಾಹನಿಗೆ ಇಷ್ಟವಾಗಲಿಲ್ಲ. ಅಲ್ಲಾಹು ದೇವವಾಣಿಯ ಮೂಲಕ ಮೂಸಾರೊಡನೆ (ಅವರ ಮೇಲೆ ಶಾಂತಿಯಿರಲಿ) ಹೇಳಿದನು: “ನಿಮಗಿಂತ ಹೆಚ್ಚು ಜ್ಞಾನವಿರುವ ವ್ಯಕ್ತಿಯಿದ್ದಾರೆ.” ಮೂಸಾ ಹೇಳಿದರು: “ಅವರನ್ನು ನನಗೆ ತೋರಿಸು. ನಾನು ಅವರನ್ನು ಭೇಟಿಯಾಗಬೇಕು.” ಅಲ್ಲಾಹು ಹೇಳಿದನು: “ಅವರು ಎರಡು ಕಡಲುಗಳ ಸಂಗಮ ಸ್ಥಳದಲ್ಲಿದ್ದಾರೆ.” ಅಲ್ಲಾಹು ತಿಳಿಸಿದಂತೆ ಮೂಸಾ (ಅವರ ಮೇಲೆ ಶಾಂತಿಯಿರಲಿ) ಒಂದು ಮೀನನ್ನು ತೆಗೆದುಕೊಂಡು ಹೋದರು. ಅದು ಬುಟ್ಟಿಯಿಂದ ನೆಗೆದು ಅಪ್ರತ್ಯಕ್ಷವಾಗುವ ಸ್ಥಳದಲ್ಲಿ ಆ ವ್ಯಕ್ತಿ ಸಿಗುತ್ತಾರೆಂದು ಅಲ್ಲಾಹು ದೇವವಾಣಿಯ ಮೂಲಕ ತಿಳಿಸಿದ್ದನು.