[1] ಸ್ವರ್ಗ ಮತ್ತು ನರಕಗಳ ನಡುವೆ ಅಥವಾ ಸತ್ಯವಿಶ್ವಾಸಿಗಳು ಮತ್ತು ಸತ್ಯನಿಷೇಧಿಗಳ ನಡುವೆ ಒಂದು ಅಡ್ಢಗೋಡೆಯನ್ನು ಸ್ಥಾಪಿಸಲಾಗುವುದು.
[2] ಹೆಚ್ಚಿನ ವ್ಯಾಖ್ಯಾನಕಾರರ ಪ್ರಕಾರ ಇವರು ಸ್ವರ್ಗ ಅಥವಾ ನರಕಕ್ಕೆ ಹೋಗದೆ ಅತಂತ್ರ ಸ್ಥಿತಿಯಲ್ಲಿರುವವರು. ಇವರ ದುಷ್ಕರ್ಮಗಳು ಇವರನ್ನು ಸ್ವರ್ಗ ಪ್ರವೇಶದಿಂದ ಮತ್ತು ಇವರ ಸತ್ಕರ್ಮಗಳು ಇವರನ್ನು ನರಕ ಪ್ರವೇಶದಿಂದ ತಡೆಯುತ್ತಿವೆ. ಇವರ ಬಗ್ಗೆ ಅಲ್ಲಾಹು ಅಂತಿಮ ತೀರ್ಪು ನೀಡುವ ತನಕ ಇವರು ಇವೆರಡರ ನಡುವಿನಲ್ಲಿರುವರು.