[1] ಅಂದರೆ ನೀವು ಯುವಕರಾಗಿದ್ದರೂ, ವೃದ್ಧರಾಗಿದ್ದರೂ, ಸಂತೋಷದಲ್ಲಿದ್ದರೂ, ಕಷ್ಟದಲ್ಲಿದ್ದರೂ, ವಾಹನವಿದ್ದರೂ, ಇಲ್ಲದಿದ್ದರೂ ಎಲ್ಲಾ ಸಂದರ್ಭಗಳಲ್ಲೂ ಯುದ್ಧಕ್ಕೆ ಹೊರಡಿರಿ.
[1] ಯುದ್ಧಕ್ಕೆ ಹೋಗದಿರಲು ವಿನಾಯಿತಿಯಿರುವವರ ಹೊರತು ಉಳಿದವರೆಲ್ಲರೂ ತಬೂಕ್ ಯುದ್ಧಕ್ಕೆ ಹೊರಡಬೇಕೆಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಆದೇಶ ಹೊರಡಿಸಿದಾಗ, ಕಪಟವಿಶ್ವಾಸಿಗಳು ಸುಳ್ಳು ನೆಪಗಳನ್ನು ಹೇಳಿ ಯುದ್ಧದಿಂದ ತಪ್ಪಿಸಿಕೊಂಡರು. ಇಲ್ಲಿಂದ ಮುಂದಕ್ಕೆ ಆ ಕಪಟವಿಶ್ವಾಸಿಗಳ ಬಗ್ಗೆ ವಿವರಿಸಲಾಗಿದೆ.