[1] ಯಹೂದಿಗಳಲ್ಲಿದ್ದ ನೀತಿವಂತರಲ್ಲಿ ಕೆಲವರು ದುಷ್ಟರಿಗೆ ಬುದ್ಧಿವಾದ ಹೇಳಿದಾಗ, ಇತರರು ಹೇಳಿದರು: “ಅವರಿಗೆ ಬುದ್ಧಿವಾದ ಹೇಳಲು ಹೋಗಬೇಡಿ. ಅವರು ಹೇಗೂ ಅಲ್ಲಾಹನ ಶಿಕ್ಷೆಗೆ ಪಾತ್ರರಾಗುವವರು. ಅವರಿಗೆ ಉಪದೇಶ ಮಾಡುವುದು ವ್ಯರ್ಥ.” ಆದರೆ ಇದು ಸರಿಯಾದ ನಿಲುವಲ್ಲ. ಒಳಿತನ್ನು ಆದೇಶಿಸುವುದು ಮತ್ತು ಕೆಡುಕನ್ನು ವಿರೋಧಿಸುವುದು ಸತ್ಯವಿಶ್ವಾಸಿಯ ಗುಣವಾಗಿದೆ.
[1] ಯಹೂದಿಗಳು ಸ್ವಯಂ ಅವರನ್ನು ದೇವರ ಮಕ್ಕಳು ಮತ್ತು ಶ್ರೇಷ್ಠ ಜನರೆಂದು ನಂಬುತ್ತಾರೆ. ಆದ್ದರಿಂದ ಅವರು ಏನೇ ತಪ್ಪು ಮಾಡಿದರೂ ಅಲ್ಲಾಹು ಅವರನ್ನು ಕ್ಷಮಿಸುತ್ತಾನೆಂಬ ಭಾವನೆ ಅವರಲ್ಲಿದೆ.