அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

ಅಲ್ -ಮುಮ್ತಹನ

external-link copy
1 : 60

یٰۤاَیُّهَا الَّذِیْنَ اٰمَنُوْا لَا تَتَّخِذُوْا عَدُوِّیْ وَعَدُوَّكُمْ اَوْلِیَآءَ تُلْقُوْنَ اِلَیْهِمْ بِالْمَوَدَّةِ وَقَدْ كَفَرُوْا بِمَا جَآءَكُمْ مِّنَ الْحَقِّ ۚ— یُخْرِجُوْنَ الرَّسُوْلَ وَاِیَّاكُمْ اَنْ تُؤْمِنُوْا بِاللّٰهِ رَبِّكُمْ ؕ— اِنْ كُنْتُمْ خَرَجْتُمْ جِهَادًا فِیْ سَبِیْلِیْ وَابْتِغَآءَ مَرْضَاتِیْ تُسِرُّوْنَ اِلَیْهِمْ بِالْمَوَدَّةِ ۖۗ— وَاَنَا اَعْلَمُ بِمَاۤ اَخْفَیْتُمْ وَمَاۤ اَعْلَنْتُمْ ؕ— وَمَنْ یَّفْعَلْهُ مِنْكُمْ فَقَدْ ضَلَّ سَوَآءَ السَّبِیْلِ ۟

ಓ ಸತ್ಯವಿಶ್ವಾಸಿಗಳೇ! ನನ್ನ ಮತ್ತು ನಿಮ್ಮ ವೈರಿಗಳನ್ನು ಮಿತ್ರರನ್ನಾಗಿ ಮಾಡಿಕೊಳ್ಳಬೇಡಿ. ನೀವು ಅವರೊಡನೆ ಮೈತ್ರಿ ಮಾಡಿಕೊಂಡು ಅವರಿಗೆ ಸಂದೇಶವನ್ನು ಕಳುಹಿಸುತ್ತೀರಿ. ನಿಮ್ಮ ಬಳಿಗೆ ಬಂದಿರುವ ಸತ್ಯವನ್ನು ಅವರು ನಿಷೇಧಿಸಿದ್ದಾರೆ. ನೀವು ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ವಿಶ್ವಾಸವಿಡುತ್ತೀರಿ ಎಂಬ ಕಾರಣದಿಂದ ಅವರು ಸಂದೇಶವಾಹಕರನ್ನು ಮತ್ತು ನಿಮ್ಮನ್ನು ಊರಿನಿಂದ ಗಡೀಪಾರು ಮಾಡುತ್ತಿದ್ದಾರೆ. ನೀವು ನನ್ನ ಮಾರ್ಗದಲ್ಲಿ ಯುದ್ಧ ಮಾಡಲು ಹೊರಟಿದ್ದರೆ ಮತ್ತು ನನ್ನ ಸಂಪ್ರೀತಿಯನ್ನು ಪಡೆಯುವುದು ನಿಮ್ಮ ಉದ್ದೇಶವಾಗಿದ್ದರೆ (ಅವರೊಂದಿಗೆ ಮೈತ್ರಿ ಮಾಡಿಕೊಳ್ಳಬೇಡಿ). ನೀವು ರಹಸ್ಯವಾಗಿ ಅವರಿಗೆ ಪ್ರೀತಿಯ ಸಂದೇಶವನ್ನು ಕಳುಹಿಸುತ್ತಿದ್ದೀರಿ. ನೀವು ಮುಚ್ಚಿಡುವುದನ್ನು ಮತ್ತು ಬಹಿರಂಗಪಡಿಸುವುದನ್ನು ನಾನು ಬಹಳ ಚೆನ್ನಾಗಿ ತಿಳಿದಿದ್ದೇನೆ. ನಿಮ್ಮಲ್ಲಿ ಯಾರು ಹೀಗೆ ಮಾಡುತ್ತಾನೋ ಅವನು ನೇರ ಮಾರ್ಗದಿಂದ ತಪ್ಪಿಹೋಗಿದ್ದಾನೆ.[1] info

[1] ಹುದೈಬಿಯಾ ಒಪ್ಪಂದದ ಬಳಿಕ ಮಕ್ಕಾದ ಸತ್ಯನಿಷೇಧಿಗಳು ಒಪ್ಪಂದವನ್ನು ಉಲ್ಲಂಘಿಸಿದರು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ವಿರುದ್ಧ ಯುದ್ಧದ ತಯಾರಿ ನಡೆಸಿದರು. ಪ್ರವಾದಿಯ ಅನುಯಾಯಿಗಳಲ್ಲಿ ಒಬ್ಬರಾಗಿದ್ದ ಹಾತಿಬ್ ಬಿನ್ ಅಬೂ ಸಅಲಬ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಮಕ್ಕಾದಿಂದ ಹಿಜ್ರ (ವಲಸೆ) ಮಾಡಿದ ಸಹಾಬಿಯಾಗಿದ್ದರು. ಇವರು ಬದ್ರ್ ಯುದ್ಧದಲ್ಲಿ ಪಾಲ್ಗೊಂಡಿದ್ದರು. ಇವರಿಗೆ ಮಕ್ಕಾದ ಕುರೈಶರೊಡನೆ ಯಾವುದೇ ಸಂಬಂಧವಿರದಿದ್ದರೂ, ಇವರ ಮಡದಿ ಮಕ್ಕಳು ಮಕ್ಕಾದಲ್ಲಿದ್ದರು. ಮಕ್ಕಾದ ಸತ್ಯನಿಷೇಧಿಗಳು ತನ್ನ ಮಡದಿ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಲಿ ಎಂಬ ಉದ್ದೇಶದಿಂದ ಅವರು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಯುದ್ಧದ ತಯಾರಿ ನಡೆಸುವ ಸುದ್ದಿಯನ್ನು ರಹಸ್ಯವಾಗಿ ಮಕ್ಕಾದ ಸತ್ಯನಿಷೇಧಿಗಳಿಗೆ ತಿಳಿಸಿದರು. ಇದಕ್ಕಾಗಿ ಅವರು ಒಬ್ಬ ಮಹಿಳೆಯನ್ನು ಗೊತ್ತುಪಡಿಸಿ ಆಕೆಯೊಡನೆ ಮಕ್ಕಾದವರಿಗೆ ಒಂದು ಪತ್ರವನ್ನು ಕಳುಹಿಸಿದರು. ಈ ವಿಷಯ ದೇವವಾಣಿಯ ಮೂಲಕ ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಯಿತು. ಅವರು ಸಹಾಬಿಗಳನ್ನು ಕಳುಹಿಸಿ ಆ ಮಹಿಳೆಯಿಂದ ಪತ್ರವನ್ನು ಕಿತ್ತುಕೊಂಡು ಬರುವಂತೆ ಹೇಳಿದರು. ನಂತರ ಹಾತಿಬ್ (ಅವರ ಬಗ್ಗೆ ಅಲ್ಲಾಹು ಸಂಪ್ರೀತನಾಗಲಿ) ರನ್ನು ವಿಚಾರಿಸಿದರು. ಹಾತಿಬ್ ತನ್ನ ಪ್ರಾಮಾಣಿಕ ಉದ್ದೇಶವನ್ನು ಮುಚ್ಚುಮರೆಯಿಲ್ಲದೆ ವಿವರಿಸಿದಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರನ್ನು ಕ್ಷಮಿಸಿದರು. ಮುಂದೆ ಸತ್ಯವಿಶ್ವಾಸಿಗಳಲ್ಲಿ ಯಾರೂ ಇಂತಹ ಕೆಲಸ ಮಾಡಬಾರದೆಂಬ ಉದ್ದೇಶದಿಂದ ಅಲ್ಲಾಹು ಈ ವಚನಗಳನ್ನು ಅವತೀರ್ಣಗೊಳಿಸಿದನು.

التفاسير:

external-link copy
2 : 60

اِنْ یَّثْقَفُوْكُمْ یَكُوْنُوْا لَكُمْ اَعْدَآءً وَّیَبْسُطُوْۤا اِلَیْكُمْ اَیْدِیَهُمْ وَاَلْسِنَتَهُمْ بِالسُّوْٓءِ وَوَدُّوْا لَوْ تَكْفُرُوْنَ ۟ؕ

ಅವರು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಿದರೆ ನಿಮ್ಮ ಪ್ರತ್ಯಕ್ಷ ವೈರಿಗಳಾಗಿ ಬಿಡುತ್ತಾರೆ. ಅವರು ಕೆಟ್ಟ ಉದ್ದೇಶದೊಂದಿಗೆ ನಿಮ್ಮ ವಿರುದ್ಧ ಅವರ ಕೈಗಳನ್ನು ಮತ್ತು ನಾಲಗೆಗಳನ್ನು ಚಾಚುತ್ತಾರೆ. ನೀವು ಕೂಡ ಸತ್ಯನಿಷೇಧಿಗಳಾಗಬೇಕೆಂದು ಅವರು ಬಯಸುತ್ತಾರೆ. info
التفاسير:

external-link copy
3 : 60

لَنْ تَنْفَعَكُمْ اَرْحَامُكُمْ وَلَاۤ اَوْلَادُكُمْ ۛۚ— یَوْمَ الْقِیٰمَةِ ۛۚ— یَفْصِلُ بَیْنَكُمْ ؕ— وَاللّٰهُ بِمَا تَعْمَلُوْنَ بَصِیْرٌ ۟

ಪುನರುತ್ಥಾನ ದಿನದಂದು ನಿಮ್ಮ ರಕ್ತ ಸಂಬಂಧಗಳು ಮತ್ತು ನಿಮ್ಮ ಮಕ್ಕಳು ನಿಮಗೆ ಪ್ರಯೋಜನಪಡುವುದಿಲ್ಲ. ಅಲ್ಲಾಹು ನಿಮ್ಮ ನಡುವೆ ತೀರ್ಪು ನೀಡುತ್ತಾನೆ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ. info
التفاسير:

external-link copy
4 : 60

قَدْ كَانَتْ لَكُمْ اُسْوَةٌ حَسَنَةٌ فِیْۤ اِبْرٰهِیْمَ وَالَّذِیْنَ مَعَهٗ ۚ— اِذْ قَالُوْا لِقَوْمِهِمْ اِنَّا بُرَءٰٓؤُا مِنْكُمْ وَمِمَّا تَعْبُدُوْنَ مِنْ دُوْنِ اللّٰهِ ؗ— كَفَرْنَا بِكُمْ وَبَدَا بَیْنَنَا وَبَیْنَكُمُ الْعَدَاوَةُ وَالْبَغْضَآءُ اَبَدًا حَتّٰی تُؤْمِنُوْا بِاللّٰهِ وَحْدَهٗۤ اِلَّا قَوْلَ اِبْرٰهِیْمَ لِاَبِیْهِ لَاَسْتَغْفِرَنَّ لَكَ وَمَاۤ اَمْلِكُ لَكَ مِنَ اللّٰهِ مِنْ شَیْءٍ ؕ— رَبَّنَا عَلَیْكَ تَوَكَّلْنَا وَاِلَیْكَ اَنَبْنَا وَاِلَیْكَ الْمَصِیْرُ ۟

ನಿಮಗೆ ಇಬ್ರಾಹೀಮ‌ರಲ್ಲಿ ಮತ್ತು ಅವರ ಸಂಗಡಿಗರಲ್ಲಿ ಅತ್ಯುತ್ತಮ ಮಾದರಿಯಿದೆ. ಅವರು ತಮ್ಮ ಜನರೊಂದಿಗೆ ಹೇಳಿದ ಸಂದರ್ಭ: “ನಿಶ್ಚಯವಾಗಿಯೂ ನಾವು ನಿಮ್ಮಿಂದ ಮತ್ತು ಅಲ್ಲಾಹನನ್ನು ಬಿಟ್ಟು ನೀವು ಆರಾಧಿಸುತ್ತಿರುವ ದೇವರುಗಳಿಂದ ಸಂಪೂರ್ಣ ದೂರವಾಗಿದ್ದೇವೆ. ನಾವು ನಿಮ್ಮ (ವಿಶ್ವಾಸ ನಂಬಿಕೆಗಳನ್ನು) ನಿಷೇಧಿಸಿದ್ದೇವೆ. ನೀವು ಅಲ್ಲಾಹನಲ್ಲಿ ಮಾತ್ರ ವಿಶ್ವಾಸವಿಡುವ ತನಕ ನಮ್ಮ ಮತ್ತು ನಿಮ್ಮ ನಡುವೆ ಶಾಶ್ವತ ವೈರ ಹಾಗೂ ವಿದ್ವೇಷವು ಬಹಿರಂಗವಾಗಿಬಿಟ್ಟಿದೆ.” ಆದರೆ ಇಬ್ರಾಹೀಮರು ತಮ್ಮ ತಂದೆಯೊಡನೆ ಹೇಳಿದ ಈ ಮಾತುಗಳು ಇದಕ್ಕೆ ಹೊರತಾಗಿವೆ:[1] “ನಾನು ನಿಮಗೋಸ್ಕರ ಅಲ್ಲಾಹನಲ್ಲಿ ಖಂಡಿತ ಕ್ಷಮೆಯಾಚಿಸುತ್ತೇನೆ. ಅಲ್ಲಾಹನ ಮುಂದೆ ನಿಮಗೋಸ್ಕರ ಏನೂ ಮಾಡಲು ನನಗೆ ಸಾಧ್ಯವಿಲ್ಲ.” ಓ ನಮ್ಮ ಪರಿಪಾಲಕನೇ! ನಾವು ನಿನ್ನಲ್ಲಿ ಭರವಸೆಯಿಟ್ಟಿದ್ದೇವೆ ಮತ್ತು ನಿನ್ನ ಕಡೆಗೆ ಮರಳಿದ್ದೇವೆ. ಮರಳಬೇಕಾದುದು ನಿನ್ನ ಕಡೆಗೇ ಆಗಿದೆ. info

[1] ಅಂದರೆ “ನಾನು ನಿಮಗೋಸ್ಕರ ಅಲ್ಲಾಹನಲ್ಲಿ ಖಂಡಿತ ಕ್ಷಮೆಯಾಚಿಸುತ್ತೇನೆ” ಎಂದು ಇಬ್ರಾಹೀಮರು (ಅವರ ಮೇಲೆ ಶಾಂತಿಯಿರಲಿ) ಹೇಳಿದ ಮಾತಿನಲ್ಲಿ ಸತ್ಯವಿಶ್ವಾಸಿಗಳಿಗೆ ಮಾದರಿಯಿಲ್ಲ.

التفاسير:

external-link copy
5 : 60

رَبَّنَا لَا تَجْعَلْنَا فِتْنَةً لِّلَّذِیْنَ كَفَرُوْا وَاغْفِرْ لَنَا رَبَّنَا ۚ— اِنَّكَ اَنْتَ الْعَزِیْزُ الْحَكِیْمُ ۟

ನಮ್ಮ ಪರಿಪಾಲಕನೇ! ನಮ್ಮನ್ನು ಸತ್ಯನಿಷೇಧಿಗಳ ಪರೀಕ್ಷೆಗೆ ಗುರಿಯಾಗಿಸಬೇಡ. ನಮ್ಮ ಪರಿಪಾಲಕನೇ! ನಮ್ಮನ್ನು ಕ್ಷಮಿಸು. ನಿಶ್ಚಯವಾಗಿಯೂ ನೀನು ಪ್ರಬಲನು ಮತ್ತು ವಿವೇಕಪೂರ್ಣನಾಗಿರುವೆ. info
التفاسير: