పవిత్ర ఖురాన్ యొక్క భావార్థాల అనువాదం - కన్నడ అనువాదం - హమ్జా బత్తూర్

పేజీ నెంబరు:close

external-link copy
53 : 3

رَبَّنَاۤ اٰمَنَّا بِمَاۤ اَنْزَلْتَ وَاتَّبَعْنَا الرَّسُوْلَ فَاكْتُبْنَا مَعَ الشّٰهِدِیْنَ ۟

“ಓ ನಮ್ಮ ಪರಿಪಾಲಕನೇ! ನೀನು ಅವತೀರ್ಣಗೊಳಿಸಿದ ಸಂದೇಶದಲ್ಲಿ ನಾವು ವಿಶ್ವಾಸವಿಟ್ಟಿದ್ದೇವೆ. ನಾವು ನಿನ್ನ ಸಂದೇಶವಾಹಕರನ್ನು ಅನುಸರಿಸಿದ್ದೇವೆ. ಆದ್ದರಿಂದ ನಮ್ಮನ್ನು ಸಾಕ್ಷಿಗಳಲ್ಲಿ ದಾಖಲಿಸು.” info
التفاسير:

external-link copy
54 : 3

وَمَكَرُوْا وَمَكَرَ اللّٰهُ ؕ— وَاللّٰهُ خَیْرُ الْمٰكِرِیْنَ ۟۠

ಅವರು (ಸತ್ಯನಿಷೇಧಿಗಳು) ತಂತ್ರಗಾರಿಕೆ ಮಾಡಿದರು. ಅಲ್ಲಾಹು ಕೂಡ ತಂತ್ರಗಾರಿಕೆ ಮಾಡಿದನು. ಅಲ್ಲಾಹು ತಂತ್ರಗಾರಿಕೆ ಮಾಡುವುದರಲ್ಲಿ ಅತ್ಯುತ್ತಮನಾಗಿದ್ದಾನೆ. info
التفاسير:

external-link copy
55 : 3

اِذْ قَالَ اللّٰهُ یٰعِیْسٰۤی اِنِّیْ مُتَوَفِّیْكَ وَرَافِعُكَ اِلَیَّ وَمُطَهِّرُكَ مِنَ الَّذِیْنَ كَفَرُوْا وَجَاعِلُ الَّذِیْنَ اتَّبَعُوْكَ فَوْقَ الَّذِیْنَ كَفَرُوْۤا اِلٰی یَوْمِ الْقِیٰمَةِ ۚ— ثُمَّ اِلَیَّ مَرْجِعُكُمْ فَاَحْكُمُ بَیْنَكُمْ فِیْمَا كُنْتُمْ فِیْهِ تَخْتَلِفُوْنَ ۟

ಅಲ್ಲಾಹು ಹೇಳಿದ ಸಂದರ್ಭ: “ಓ ಈಸಾ! ನಿಶ್ಚಯವಾಗಿಯೂ ನಾನು ನಿಮ್ಮನ್ನು ಪೂರ್ಣವಾಗಿ ವಹಿಸಿಕೊಳ್ಳುವೆನು, ನಿಮ್ಮನ್ನು ನನ್ನ ಬಳಿಗೆ ಎತ್ತಿಕೊಳ್ಳುವೆನು ಮತ್ತು ಸತ್ಯನಿಷೇಧಿಗಳಿಂದ ನಿಮ್ಮನ್ನು ಪರಿಶುದ್ಧಗೊಳಿಸುವೆನು. ನಿಮ್ಮ ಅನುಯಾಯಿಗಳನ್ನು ಪುನರುತ್ಥಾನ ದಿನದವರೆಗೂ ಸತ್ಯನಿಷೇಧಿಗಳ ಮೇಲೆ ಪ್ರಬಲರನ್ನಾಗಿ ಮಾಡುವೆನು. ನಂತರ ನೀವು ನನ್ನ ಬಳಿಗೆ ಮರಳುವಿರಿ. ಆಗ ನೀವು ಭಿನ್ನಾಭಿಪ್ರಾಯ ತಳೆದ ವಿಷಯಗಳಲ್ಲಿ ನಾನು ನಿಮ್ಮ ನಡುವೆ ತೀರ್ಪು ನೀಡುವೆನು. info
التفاسير:

external-link copy
56 : 3

فَاَمَّا الَّذِیْنَ كَفَرُوْا فَاُعَذِّبُهُمْ عَذَابًا شَدِیْدًا فِی الدُّنْیَا وَالْاٰخِرَةِ ؗ— وَمَا لَهُمْ مِّنْ نّٰصِرِیْنَ ۟

ಸತ್ಯನಿಷೇಧಿಗಳು ಯಾರೋ—ಅವರಿಗೆ ನಾನು ಇಹಲೋಕದಲ್ಲೂ, ಪರಲೋಕದಲ್ಲೂ ಕಠೋರ ಶಿಕ್ಷೆಯನ್ನು ನೀಡುವೆನು. ಅವರಿಗೆ ಯಾವುದೇ ಸಹಾಯಕರಿಲ್ಲ.” info
التفاسير:

external-link copy
57 : 3

وَاَمَّا الَّذِیْنَ اٰمَنُوْا وَعَمِلُوا الصّٰلِحٰتِ فَیُوَفِّیْهِمْ اُجُوْرَهُمْ ؕ— وَاللّٰهُ لَا یُحِبُّ الظّٰلِمِیْنَ ۟

ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರಿಗೆ ಅಲ್ಲಾಹು ಅವರ ಪ್ರತಿಫಲವನ್ನು ಪೂರ್ಣವಾಗಿ ನೀಡುವನು. ಅಲ್ಲಾಹು ಅಕ್ರಮವೆಸಗುವವರನ್ನು ಇಷ್ಟಪಡುವುದಿಲ್ಲ. info
التفاسير:

external-link copy
58 : 3

ذٰلِكَ نَتْلُوْهُ عَلَیْكَ مِنَ الْاٰیٰتِ وَالذِّكْرِ الْحَكِیْمِ ۟

ನಾವು ನಿಮಗೆ ಓದಿಕೊಡುತ್ತಿರುವ ಈ ವಿಷಯಗಳು ಅಲ್ಲಾಹನ ವಚನಗಳಲ್ಲಿ ಮತ್ತು ವಿವೇಕಪೂರ್ಣ ಉಪದೇಶಗಳಲ್ಲಿ ಸೇರಿದ್ದಾಗಿವೆ. info
التفاسير:

external-link copy
59 : 3

اِنَّ مَثَلَ عِیْسٰی عِنْدَ اللّٰهِ كَمَثَلِ اٰدَمَ ؕ— خَلَقَهٗ مِنْ تُرَابٍ ثُمَّ قَالَ لَهٗ كُنْ فَیَكُوْنُ ۟

ಅಲ್ಲಾಹನ ದೃಷ್ಟಿಯಲ್ಲಿ ಈಸಾರ ಉದಾಹರಣೆಯು ಆದಮರಂತೆ. ಅವನು ಆದಮರನ್ನು ಮಣ್ಣಿನಿಂದ ಸೃಷ್ಟಿಸಿದನು. ನಂತರ ಅವರೊಡನೆ ಉಂಟಾಗು ಎಂದನು. ಆಗ ಅವರು ಉಂಟಾದರು. info
التفاسير:

external-link copy
60 : 3

اَلْحَقُّ مِنْ رَّبِّكَ فَلَا تَكُنْ مِّنَ الْمُمْتَرِیْنَ ۟

ಇದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವಾಗಿದೆ. ಆದ್ದರಿಂದ ನೀವು ಸಂಶಯಪಡುವವರಲ್ಲಿ ಸೇರಲೇಬೇಡಿ. info
التفاسير:

external-link copy
61 : 3

فَمَنْ حَآجَّكَ فِیْهِ مِنْ بَعْدِ مَا جَآءَكَ مِنَ الْعِلْمِ فَقُلْ تَعَالَوْا نَدْعُ اَبْنَآءَنَا وَاَبْنَآءَكُمْ وَنِسَآءَنَا وَنِسَآءَكُمْ وَاَنْفُسَنَا وَاَنْفُسَكُمْ ۫— ثُمَّ نَبْتَهِلْ فَنَجْعَلْ لَّعْنَتَ اللّٰهِ عَلَی الْكٰذِبِیْنَ ۟

ನಿಮ್ಮ ಬಳಿಗೆ ಜ್ಞಾನವು ಬಂದ ಬಳಿಕವೂ ಅವರ (ಈಸಾರ) ವಿಷಯದಲ್ಲಿ ಯಾರಾದರೂ ನಿಮ್ಮೊಂದಿಗೆ ತರ್ಕಿಸಿದರೆ ನೀವು ಹೇಳಿರಿ: “ಬನ್ನಿ! ನಾವು ನಮ್ಮ ಮಕ್ಕಳನ್ನು ಮತ್ತು ನಿಮ್ಮ ಮಕ್ಕಳನ್ನು, ನಮ್ಮ ಮಹಿಳೆಯರನ್ನು ಮತ್ತು ನಿಮ್ಮ ಮಹಿಳೆಯರನ್ನು, ನಮ್ಮನ್ನು ಮತ್ತು ನಿಮ್ಮನ್ನು (ಎಲ್ಲರನ್ನೂ) ಕರೆದು ಒಟ್ಟುಗೂಡೋಣ. ನಂತರ ಮನಸಾರೆ ಪ್ರಾರ್ಥಿಸಿ ಸುಳ್ಳು ಹೇಳುವವರ ಮೇಲೆ ಅಲ್ಲಾಹನ ಶಾಪವವಿರಲೆಂದು ಬೇಡಿಕೊಳ್ಳೋಣ.”[1] info

[1] ಈ ವಚನವನ್ನು ಆಯತುಲ್ ಮುಬಾಹಲ (ಶಾಪಪ್ರಾರ್ಥನೆಯ ವಚನ) ಎಂದು ಕರೆಯಲಾಗುತ್ತದೆ. ಎರಡು ಗುಂಪುಗಳ ನಡುವೆ ಭಿನ್ನಮತವಿರುವ ಒಂದು ವಿಷಯವು ಮಾತುಕತೆಯಿಂದ ಅಥವಾ ಇತರ ವಿಧಾನಗಳಿಂದ ಪರಿಹಾರವಾಗದೆ, ಎರಡು ಗುಂಪುಗಳೂ ನಾವೇ ಸತ್ಯದಲ್ಲಿರುವವರು ಎಂದು ಹಟ ಹಿಡಿದರೆ, ಆ ಎರಡು ಗುಂಪುಗಳು ಸೇರಿ ಅಸತ್ಯದಲ್ಲಿರುವ ಗುಂಪಿನ ಮೇಲೆ ಅಲ್ಲಾಹನ ಶಾಪವಿರಲಿ ಎಂದು ಅಲ್ಲಾಹನಲ್ಲಿ ಮನಸಾರೆ ಪ್ರಾರ್ಥಿಸುವುದನ್ನು ಶಾಪ ಪ್ರಾರ್ಥನೆ ಎನ್ನಲಾಗುತ್ತದೆ.

التفاسير: